ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ : ಜನರಿಗೆ ನಗರ ಬಿಟ್ಟು ತೆರಳುವಂತೆ ಸೂಚನೆ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ 

ಜನರಿಗೆ ನಗರ ಬಿಟ್ಟು ದೇಶಕ್ಕೆ ತೆರಳುವಂತೆ ಸೂಚನೆ

ಕೀವ್: ರಷ್ಯಾ ಎರಡನೇ ಬಾರಿಗೆ ಉಕ್ರೇನ್‍ನಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದ್ದು, ಕೀವ್, ಖಾರ್ಕಿವ್, ಸುಮಿ, ಮರಿಯುಪೋಲ್‍ನ ಜನರಿಗೆ ನಗರವನ್ನು ಬಿಟ್ಟು ತೆರಳಲು ಸೂಚಿಸಿದೆ.

ರಷ್ಯಾ ಉಕ್ರೇನ್‍ನ ಮೇಲೆ ನಡೆಸುತ್ತಿರುವ ದಾಳಿ 12ನೇ ದಿನಕ್ಕೆ ಕಾಲಿಟ್ಟಿದ್ದು, ಎರಡನೇ ಬಾರಿಗೆ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:30ನಂತರ ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ ಮಾಡಿದೆ.

ಫ್ರಾನ್ಸ್ ಅಧ್ಯಕ್ಷರ ಸೂಚನೆ ಮೇರೆಗೆ ಕದನ ವಿರಾಮ ಘೋಷಿಸಲಾಗಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕದನ ವಿರಾಮಕ್ಕೆ ವೈಯಕ್ತಿಕವಾಗಿ ಕೋರಿಕೆಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ನಗರಗಳಲ್ಲಿ ಕದನ ವಿರಾಮವನ್ನು ಘೋಷಿಸಿ, ನಾಗರಿಕರನ್ನು ತೆರಳುವಂತೆ ಸೂಚಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಉಕ್ರೇನ್ ನಲ್ಲಿ ಗುಂಡೇಟು ತಗುಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ಇಂದು ಭಾರತಕ್ಕೆ – Vishwanews24

Leave a Reply