Featured

ಉಕ್ರೇನ್ ನ ಬಂಕರ್ ನಲ್ಲೇ ಬಾಕಿಯಾದ ಉಜಿರೆ ವಿದ್ಯಾರ್ಥಿನಿ – Vishwanews24

 

ಉಕ್ರೇನ್ ನ ಬಂಕರ್ ನಲ್ಲೇ ಬಾಕಿಯಾದ ಉಜಿರೆ ವಿದ್ಯಾರ್ಥಿನಿ – Vishwanews24

ಬೆಳ್ತಂಗಡಿ: ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಇದ್ದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ.

ಉಜಿರೆಯ ಟಿ.ಬಿ ಕ್ರಾಸ್ ನಿವಾಸಿ ದಿ. ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿ ಹೀನಾ ಫಾತಿಮಾ ಅವರೇ ಯುದ್ಧಗ್ರಸ್ಥ ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿರುವ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಹೀನಾ ಅವರು ಮೃತಪಟ್ಟ ನವೀನ್ ಅವರ ಬ್ಯಾಚ್ ನಲ್ಲೇ ಕಲಿಯುತ್ತಿದ್ದಾರೆ ಎಂದು ಅವರ ಮಾವ ಆಬಿದ್ ಅಲಿ ಅವರು ಮಾಹಿತಿ ನೀಡಿದ್ದಾರೆ.

ನವೀನ್ ಸಾವಿಗೆ ಕಾರಣವಾದ ರಷ್ಯಾ ನಡೆಸಿದ ಗಂಭೀರ ಸ್ಪೋಟ ಇವರು ಇರುವ ಕಟ್ಟಡಕ್ಕಿಂತ ಕೇವಲ 100 ಮೀ. ದೂರದಲ್ಲಿ ಆಗಿತ್ತಂತೆ. ಕಟ್ಟಡವೊಂದರ ತಳಹಂತದ ಬಂಕರ್‌ನಲ್ಲಿ‌ ಹೀನಾ ಫಾತಿಮಾ ಸೇರಿದಂತೆ ಒಟ್ಟು 7 ಮಂದಿ ಕನ್ನಡಿಗ ವಿದ್ಯಾರ್ಥಿಗಳು ತಮ್ಮನ್ನು ರಕ್ಷಿಸಿಕೊಂಡಿದ್ದರು.

ವಿದೇಶಾಂಗ ಇಲಾಖೆ ಅವರ ಜೊತೆ ಸಂಪರ್ಕ ಸಾಧಿಸಿದ್ದು, ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡುತ್ತಿದೆ. ಅಲ್ಲಿಂದ ಬುಧವಾರ ದಿವಸ ಅವರನ್ನು ಹೊರಬರುವಂತೆ ನಿರ್ದೇಶಿದ್ದು, ರೈಲು ಮಾರ್ಗದ ಮೂಲಕ 1000 ಕಿ‌.ಮೀ. ದೂರದಲ್ಲಿರುವ ಲಿವಿನ್ ಎಂಬ ಗಡಿ ಪ್ರದೇಶಕ್ಕೆ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದೆ ಎಂಬ ಮಾಹಿತಿ ಇದೆ.

ಒಂದು ದಿನ ಪ್ರಯಾಣ ನಡೆಸಿ ಗಡಿ ಸೇರಿದರೆ ಅಲ್ಲಿಂದ ವಿಮಾನದ ಮೂಲಕ ಅವರನ್ನು ಭಾರತಕ್ಕೆ ಕರೆ ತರುವ ಬಗ್ಗೆ ಎಂಬೆಸ್ಸಿ ಯೋಜನೆ ರೂಪಿಸಿದೆ. ಹೀನಾ ಫಾತಿಮಾ ಅವರ ಜೊತೆ ಚಿಕ್ಕಮಗಳೂರು, ಬೆಂಗಳೂರಿನ ಇತರ ಆರು ಮಂದಿ ಇದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago