Featured

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು – Vishwanews24

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು

ಮಾಸ್ಕೋ : ಉಕ್ರೇನ್​ ನಡೆಸಿದ ರಾಕೆಟ್ ದಾಳಿಯಲ್ಲಿ ರಷ್ಯಾದ 63 ಸೈನಿಕರು ಸಾವನ್ನಪ್ಪಿದ್ದಾರೆ.

‘ಡೊನೆಟ್ಸ್ಕ್‌ನ ಮಕಿವ್ಕಾ ಪ್ರದೇಶದಲ್ಲಿ ರಷ್ಯಾದ ಸಶಸ್ತ್ರ ಪಡೆಗಳ ಒಂದು ಘಟಕವನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡುತ್ತಿದ್ದ ಹಂತದಲ್ಲಿ ಉಕ್ರೇನಿಯನ್ ಪಡೆಗಳು ಅಮೆರಿಕ ನಿರ್ಮಿತ ಹಿಮಾರ್ಸ್‌ನ 6 ರಾಕೆಟ್‌ಗಳಿಂದ ದಾಳಿ ಮಾಡಿವೆ. ಇದರಲ್ಲಿ ನಮ್ಮ 63 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಆದಾಗ್ಯೂ ನಾಲ್ಕು ರಾಕೆಟ್​ಗಳನ್ನು ಹೊಡೆದುರುಳಿಸಲಾಗಿದೆ’ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ಸೈನಿಕರನ್ನೇ ಗುರಿಯಾಗಿಸಿಕೊಂಡ ಉಕ್ರೇನ್​ ಶಿಪಿಲೋವ್ಕಾ, ಲಿಮನ್, ಕ್ರೆಮೆನ್ನಾಯಾ, ಪ್ಲೋಶ್ಚಾಂಕಾ, ಚೆರ್ವೊನಾಯಾ ಡಿಬ್ರೊವಾ, ನಿಕೊಲಾಯೆವ್ಕಾ, ಸ್ಕೆಲ್ಕಿ ಪ್ರದೇಶಗಳ ಮೇಲೆ ನಿರಂತರ ರಾಕೆಟ್​ ದಾಳಿ ನಡೆಸಿದೆ. ಇದರಲ್ಲಿ ಡೊನೆಟ್ಸ್ಕ್​ ಪ್ರದೇಶದಲ್ಲಿ ಸೈನಿಕರು ಹತರಾಗಿದ್ದಾರೆ’ ಎಂದು ರಷ್ಯಾ ಹೇಳಿದೆ.

ಮತ್ತೊಂದೆಡೆ, ಬೆರಿಸ್ಲಾವ್ ನಗರದಲ್ಲಿ ರಶ್ಯಾ ನಡೆಸಿದ ಶೆಲ್​ ದಾಳಿಯಲ್ಲಿ ಐದು ಉಕ್ರೇನಿಗರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಕ್ರೇನ್​ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

21 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago