Featured

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು – Vishwanews24

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು

ಮಾಸ್ಕೋ : ಉಕ್ರೇನ್​ ನಡೆಸಿದ ರಾಕೆಟ್ ದಾಳಿಯಲ್ಲಿ ರಷ್ಯಾದ 63 ಸೈನಿಕರು ಸಾವನ್ನಪ್ಪಿದ್ದಾರೆ.

‘ಡೊನೆಟ್ಸ್ಕ್‌ನ ಮಕಿವ್ಕಾ ಪ್ರದೇಶದಲ್ಲಿ ರಷ್ಯಾದ ಸಶಸ್ತ್ರ ಪಡೆಗಳ ಒಂದು ಘಟಕವನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡುತ್ತಿದ್ದ ಹಂತದಲ್ಲಿ ಉಕ್ರೇನಿಯನ್ ಪಡೆಗಳು ಅಮೆರಿಕ ನಿರ್ಮಿತ ಹಿಮಾರ್ಸ್‌ನ 6 ರಾಕೆಟ್‌ಗಳಿಂದ ದಾಳಿ ಮಾಡಿವೆ. ಇದರಲ್ಲಿ ನಮ್ಮ 63 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಆದಾಗ್ಯೂ ನಾಲ್ಕು ರಾಕೆಟ್​ಗಳನ್ನು ಹೊಡೆದುರುಳಿಸಲಾಗಿದೆ’ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ಸೈನಿಕರನ್ನೇ ಗುರಿಯಾಗಿಸಿಕೊಂಡ ಉಕ್ರೇನ್​ ಶಿಪಿಲೋವ್ಕಾ, ಲಿಮನ್, ಕ್ರೆಮೆನ್ನಾಯಾ, ಪ್ಲೋಶ್ಚಾಂಕಾ, ಚೆರ್ವೊನಾಯಾ ಡಿಬ್ರೊವಾ, ನಿಕೊಲಾಯೆವ್ಕಾ, ಸ್ಕೆಲ್ಕಿ ಪ್ರದೇಶಗಳ ಮೇಲೆ ನಿರಂತರ ರಾಕೆಟ್​ ದಾಳಿ ನಡೆಸಿದೆ. ಇದರಲ್ಲಿ ಡೊನೆಟ್ಸ್ಕ್​ ಪ್ರದೇಶದಲ್ಲಿ ಸೈನಿಕರು ಹತರಾಗಿದ್ದಾರೆ’ ಎಂದು ರಷ್ಯಾ ಹೇಳಿದೆ.

ಮತ್ತೊಂದೆಡೆ, ಬೆರಿಸ್ಲಾವ್ ನಗರದಲ್ಲಿ ರಶ್ಯಾ ನಡೆಸಿದ ಶೆಲ್​ ದಾಳಿಯಲ್ಲಿ ಐದು ಉಕ್ರೇನಿಗರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಕ್ರೇನ್​ ತಿಳಿಸಿದೆ.

Vishwa News 24

Recent Posts

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

15 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

21 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

31 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

40 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

2 hours ago