ಮಕ್ರಾನಾ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾಂಗ್ರೆಸ್ ಉಗ್ರರಿಗೆ ಬಿರಿಯಾನಿ ತಿನ್ನಿಸಿದೆ. ನಾವು ಈಗ ಉಗ್ರರಿಗೆ ಗುಂಡೇಟು ತಿನ್ನಿಸುತ್ತಿದ್ದೇವೆ’ ಎಂದು ಸೋಮವಾರ ಹೇಳಿದ್ದಾರೆ.
ಇಂದು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ವಿಭಜನೆಯ ರಾಜಕಾರಣವನ್ನು ಅನುಸರಿಸಿಕೊಂಡು ಬಂದ ಕಾರಣ ದೇಶದಲ್ಲಿ ಭಯೋತ್ಪಾದನೆ ಬೆಳೆದು ಬಂದಿದೆ ಎಂದು ಆರೋಪಿಸಿದರು.
ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವಾರು ರಾಜಕೀಯ ನಾಯಕರು ಸದ್ಯ ರಾಜಸ್ಥಾನದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ರಾಜಸ್ಥಾನದ ಮಕ್ರಾನಾ ಎಂಬ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ, ಉಗ್ರಗಾಮಿಗಳಿಗೆ ಕಾಂಗ್ರೆಸ್ ಪಕ್ಷವು ಬಿರಿಯಾನಿ ನೀಡುತ್ತಿದ್ದರೆ ನಾವು ಮಾತ್ರ ಉಗ್ರಗಾಮಿಗಳಿಗೆ ಗುಂಡೇಟು ಹಾಕುತ್ತಿದ್ದೇವೆ ಎಂದು ಹೇಳಿದ್ದಾರೆ.
ಬಿರಿಯಾನಿ ತಿಂದು ಬೆಳೆದ ಉಗ್ರರಿಗೆ ನಾವು ಈಗ ಗುಂಡಿನ ರುಚಿ ತೋರಿಸುತ್ತಿರುವುದನ್ನು ನೀವು ನೋಡಿದ್ದೀರಿ. ದೇಶದಲ್ಲಿ ಭಯೋತ್ಪಾದನೆಯ ಹುಟ್ಟು, ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ, ದೇಶದಲ್ಲಿನ ಭಯೋತ್ಪಾದನೆ, ಪ್ರತ್ಯೇಕತೆ, ನಕ್ಸಲ್ವಾದ ಮತ್ತು ಭ್ರಷ್ಟಾಚಾರದಂತಹ ಪಿಡುಗುಗಳಿಗೆ ಜನ್ಮ ನೀಡಿದ್ದೇ ಕಾಂಗ್ರೆಸ್ ಎಂದು ಉತ್ತರ ಪ್ರದೇಶ ಸಿಎಂ ವಾಗ್ದಾಳಿ ನಡೆಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…