ಮಕ್ರಾನಾ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾಂಗ್ರೆಸ್ ಉಗ್ರರಿಗೆ ಬಿರಿಯಾನಿ ತಿನ್ನಿಸಿದೆ. ನಾವು ಈಗ ಉಗ್ರರಿಗೆ ಗುಂಡೇಟು ತಿನ್ನಿಸುತ್ತಿದ್ದೇವೆ’ ಎಂದು ಸೋಮವಾರ ಹೇಳಿದ್ದಾರೆ.
ಇಂದು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ವಿಭಜನೆಯ ರಾಜಕಾರಣವನ್ನು ಅನುಸರಿಸಿಕೊಂಡು ಬಂದ ಕಾರಣ ದೇಶದಲ್ಲಿ ಭಯೋತ್ಪಾದನೆ ಬೆಳೆದು ಬಂದಿದೆ ಎಂದು ಆರೋಪಿಸಿದರು.
ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವಾರು ರಾಜಕೀಯ ನಾಯಕರು ಸದ್ಯ ರಾಜಸ್ಥಾನದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ರಾಜಸ್ಥಾನದ ಮಕ್ರಾನಾ ಎಂಬ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ, ಉಗ್ರಗಾಮಿಗಳಿಗೆ ಕಾಂಗ್ರೆಸ್ ಪಕ್ಷವು ಬಿರಿಯಾನಿ ನೀಡುತ್ತಿದ್ದರೆ ನಾವು ಮಾತ್ರ ಉಗ್ರಗಾಮಿಗಳಿಗೆ ಗುಂಡೇಟು ಹಾಕುತ್ತಿದ್ದೇವೆ ಎಂದು ಹೇಳಿದ್ದಾರೆ.
ಬಿರಿಯಾನಿ ತಿಂದು ಬೆಳೆದ ಉಗ್ರರಿಗೆ ನಾವು ಈಗ ಗುಂಡಿನ ರುಚಿ ತೋರಿಸುತ್ತಿರುವುದನ್ನು ನೀವು ನೋಡಿದ್ದೀರಿ. ದೇಶದಲ್ಲಿ ಭಯೋತ್ಪಾದನೆಯ ಹುಟ್ಟು, ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ, ದೇಶದಲ್ಲಿನ ಭಯೋತ್ಪಾದನೆ, ಪ್ರತ್ಯೇಕತೆ, ನಕ್ಸಲ್ವಾದ ಮತ್ತು ಭ್ರಷ್ಟಾಚಾರದಂತಹ ಪಿಡುಗುಗಳಿಗೆ ಜನ್ಮ ನೀಡಿದ್ದೇ ಕಾಂಗ್ರೆಸ್ ಎಂದು ಉತ್ತರ ಪ್ರದೇಶ ಸಿಎಂ ವಾಗ್ದಾಳಿ ನಡೆಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…