ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನಕ್ಕೆ ನಮ್ಮ ನೆಲದಿಂದ ಹರಿದು ಹೋಗುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ : ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನ ತಿರುಗೇಟು ನೀಡಲು ನಮ್ಮ ನೆಲದಿಂದ ಹರಿದು ಹೋಗುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇಂಡಸ್ ಒಪ್ಪಂದವನ್ನು ಉಲ್ಲಂಘಿಸದೇ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ನಮ್ಮ ನೆಲದಿಂದ ಜಾಸ್ತಿ ನೀರು ಹರಿದು ಹೋಗುತ್ತದೆ. ನೀರನ್ನು ಸಂಗ್ರಹಿಸಲು ನಾವು ಜಲಾಶಯವನ್ನು ನಿರ್ಮಿಸುತ್ತಿದ್ದೇವೆ. ನಂತರ ಕಾಲುವೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ ಎಂದು ವಿವರಿಸಿದರು.

2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆದ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಭಾರತದತ್ತ ತಿರುಗಿಸಲು ಯೋಜನೆ ರೂಪಿಸಿತ್ತು. ಈ ವಿಚಾರದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದ ಅಂದಿನ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ, ಉಗ್ರರಿಗೆ ಸಹಕಾರ ನೀಡುವುದನ್ನು ಮುಂದುವರಿಸಿದರೆ ಮುಂದೆ ಸಂಪೂರ್ಣವಾಗಿ ಭಾರತದಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

 

ವಿದ್ಯುತ್ ಉತ್ಪಾದನೆಗೆ ಮಾತ್ರ ಜಲಾಶಯ ನಿರ್ಮಿಸುತ್ತಿಲ್ಲ. ಮಳೆ ಕಡಿಮೆಯಾದ ಸಂದರ್ಭದಲ್ಲಿ ನೀರನ್ನು ಹರಿಸಲು ಈ ಡ್ಯಾಂ ನಿರ್ಮಾಣ ಮಾಡುತ್ತಿದ್ದೇವೆ ಎಂದು ಸರ್ಕಾರದ ಕ್ರಮಕ್ಕೆ ಅವರು ಸಮರ್ಥನೆ ನೀಡಿದರು.