ಮುಂಬೈ: ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನ ತಿರುಗೇಟು ನೀಡಲು ನಮ್ಮ ನೆಲದಿಂದ ಹರಿದು ಹೋಗುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇಂಡಸ್ ಒಪ್ಪಂದವನ್ನು ಉಲ್ಲಂಘಿಸದೇ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ನಮ್ಮ ನೆಲದಿಂದ ಜಾಸ್ತಿ ನೀರು ಹರಿದು ಹೋಗುತ್ತದೆ. ನೀರನ್ನು ಸಂಗ್ರಹಿಸಲು ನಾವು ಜಲಾಶಯವನ್ನು ನಿರ್ಮಿಸುತ್ತಿದ್ದೇವೆ. ನಂತರ ಕಾಲುವೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ ಎಂದು ವಿವರಿಸಿದರು.
2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆದ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಭಾರತದತ್ತ ತಿರುಗಿಸಲು ಯೋಜನೆ ರೂಪಿಸಿತ್ತು. ಈ ವಿಚಾರದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದ ಅಂದಿನ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ, ಉಗ್ರರಿಗೆ ಸಹಕಾರ ನೀಡುವುದನ್ನು ಮುಂದುವರಿಸಿದರೆ ಮುಂದೆ ಸಂಪೂರ್ಣವಾಗಿ ಭಾರತದಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ವಿದ್ಯುತ್ ಉತ್ಪಾದನೆಗೆ ಮಾತ್ರ ಜಲಾಶಯ ನಿರ್ಮಿಸುತ್ತಿಲ್ಲ. ಮಳೆ ಕಡಿಮೆಯಾದ ಸಂದರ್ಭದಲ್ಲಿ ನೀರನ್ನು ಹರಿಸಲು ಈ ಡ್ಯಾಂ ನಿರ್ಮಾಣ ಮಾಡುತ್ತಿದ್ದೇವೆ ಎಂದು ಸರ್ಕಾರದ ಕ್ರಮಕ್ಕೆ ಅವರು ಸಮರ್ಥನೆ ನೀಡಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…