Featured

ಉಗ್ರರನ್ನು ಸದೆಬಡಿಯುತ್ತಿರುವ ಪ್ರಧಾನಿ ಮೋದಿ ಅವರು ಭಾರತದ ಪಿತಾಮಹ : ಡೊನಾಲ್ಡ್​ ಟ್ರಂಪ್ -Vishwanews24

ನ್ಯೂಯಾರ್ಕ್: ಭಾರತದಲ್ಲಿ ಮತ್ತು ಭಾರತದ ಗಡಿಯಾಚೆಗೆ ಉಗ್ರರನ್ನು ಸದೆಬಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪಿತಾಮಹ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದರು..

ಯುಎನ್‌ಜಿಎ ಸಭೆಯಲ್ಲಿ ಮಾತನಾಡಿದ ಟ್ರಂಪ್, “ಮೋದಿ ಅವರೊಂದಿಗಿನ ವೈಯಕ್ತಿಕ ಬಾಂಧವ್ಯ ಬಹಳ ಚೆನ್ನಾಗಿದೆ. ಭಾರತದೊಂದಿಗೆ ಶೀಘ್ರದಲ್ಲಿಯೇ ನಾವು ವ್ಯಾಪಾರ ಒಪ್ಪಂದ ಮಾಡಲಿದ್ದೇವೆ ಎಂದು ತಿಳಿಸಿದರು.

ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯ (ಯುಎನ್‌ಜಿಎ) 74 ನೇ ಅಧಿವೇಶನದ ಹೊರತಾಗಿ ಎರಡನೇ ಬಾರಿಗೆ ಭೇಟಿಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಮೆರಿಕನ್ ರಾಕ್ ‘ಎನ್’ ರೋಲ್ ದಂತಕಥೆ ಎಲ್ವಿಸ್ ಪ್ರೀಸ್ಲಿಯೊಂದಿಗೆ ಹೋಲಿಸಿದ್ದಾರೆ.

“ಅವರು ಮಹಾನ್ ವ್ಯಕ್ತಿ ಮತ್ತು ಶ್ರೇಷ್ಠ ನಾಯಕ … ನನಗೆ ನೆನಪಿದೆ, ಮೊದಲಿಗೆ ಭಾರತ ಹರಿದು ಹಂಚಿಹೋಗಿತ್ತು. ದೇಶದಲ್ಲಿ ಜಗಳ, ಒಡಕುಗಳಿದ್ದವು. ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬ ತಂದೆಯಂತೆ ಎಲ್ಲವನ್ನೂ ಒಂದುಗೂಡಿಸಿದರು. ಬಹುಶಃ ಅವರು ಭಾರತದ ಪಿತಾಮಹನಂತೆ’ ಎಂದು ಟ್ರಂಪ್ ಹೇಳಿದರು. “ನಾವು ಅವರನ್ನು ಭಾರತದ ಪಿತಾಮಹ ಎಂದು ಕರೆಯುತ್ತೇವೆ. ಅವರು ವಿಷಯಗಳನ್ನು ಒಟ್ಟಿಗೆ ತಂದಿದ್ದಾರೆ. ಅವರು ದೊಡ್ಡ ಕೆಲಸ ಮಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago