Featured

ಉಗ್ರರಿಂದ ಹತ್ಯೆಯಾದ ಸೈನಿಕ ಔರಂಗಜೇಬ್ ತಂದೆ ಬಿಜೆಪಿ ಸೇರ್ಪಡೆ – Vishwanews24

ಶ್ರೀನಗರ: ಅಪಹರಣಕ್ಕೊಳಗಾಗಿ ಉಗ್ರರಿಂದ  ಹತ್ಯೆಯಾದ ಸೈನಿಕ ಔರಂಗಜೇಬ್ ತಂದೆ ಬಿಜೆಪಿ ಸೇರಿದ್ದಾರೆ.

ಭಾನುವಾರ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ‍್ಯಾಲಿ ನಡೆಸಿದ್ದು ಈ ಸಂದರ್ಭದಲ್ಲಿ ನಿವೃತ್ತ ಸೇನಾಧಿಕಾರಿ, ಲೆಫ್ಟಿನೆಂಟ್ ( ನಿವೃತ್ತ) ರಾಕೇಶ್ ಕುಮಾರ್ ಶರ್ಮಾ ಜತೆಯಲ್ಲಿ ಮೊಹಮ್ಮದ್ ಹನೀಫ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರೈಫಲ್‌ಮ್ಯಾನ್ ಆಗಿದ್ದ ಔರಂಗಜೇಬ್ ತಂದೆಯಾಗಿರುವ ಹನೀಫ್ ರಾಜೌರಿ ನಿವಾಸಿಯಾಗಿದ್ದಾರೆ. ಪಕ್ಷಕ್ಕೆ ಸ್ವಾಗತಿಸಿದ ಪ್ರಧಾನಿಗೆ ಹನೀಫ್ ತನ್ನ ಹುತಾತ್ಮ ಪುತ್ರನ ಚಿತ್ರ ನೀಡಿದರು.

ಈ ಹತ್ಯೆಗೆ ಕಾರಣವಾದ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಲು ಔರಂಗಜೇಬ್‌ರ ಸ್ನೇಹಿತರು ಹಾಗೂ ಸಂಬಂಧಿಕರು ಗಲ್ಫ್‌ ರಾಷ್ಟ್ರಗಳಿಂದ ವಾಪಸಾಗುತ್ತಿದ್ದಾರೆ. ಅಲ್ಲದೆ, ಭದ್ರತಾ ಪಡೆಗಳೊಂದಿಗೆ ಕೈಜೋಡಿಸಲು ಇವರು ಮುಂದಾಗಿದ್ದಾರೆ.

ಬಿಜೆಪಿ ಬಡವರ ಪರ ಚಿಂತನೆಯನ್ನು ಹೊಂದಿರುವ ಕಾರಣಕ್ಕೆ ನಾನು ಈ ಪಕ್ಷ ಸೇರುತ್ತಿದ್ದೇನೆ. ಈ ಹಿಂದಿನ ಸರಕಾರಗಳಿಗಿಂತ ವಿಭಿನ್ನವಾಗಿರುವ ಮೋದಿ ಸರಕಾರ ಬಡವರ ಕಲ್ಯಾಣಕ್ಕೆ ಸದಾ ತತ್ಪರವಾಗಿದೆ, ಎಂದು ಹನೀಫ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago