Featured

ಉಗ್ರರಿಂದ ಹತ್ಯೆಯಾದ ಸೈನಿಕ ಔರಂಗಜೇಬ್ ತಂದೆ ಬಿಜೆಪಿ ಸೇರ್ಪಡೆ – Vishwanews24

ಶ್ರೀನಗರ: ಅಪಹರಣಕ್ಕೊಳಗಾಗಿ ಉಗ್ರರಿಂದ  ಹತ್ಯೆಯಾದ ಸೈನಿಕ ಔರಂಗಜೇಬ್ ತಂದೆ ಬಿಜೆಪಿ ಸೇರಿದ್ದಾರೆ.

ಭಾನುವಾರ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ‍್ಯಾಲಿ ನಡೆಸಿದ್ದು ಈ ಸಂದರ್ಭದಲ್ಲಿ ನಿವೃತ್ತ ಸೇನಾಧಿಕಾರಿ, ಲೆಫ್ಟಿನೆಂಟ್ ( ನಿವೃತ್ತ) ರಾಕೇಶ್ ಕುಮಾರ್ ಶರ್ಮಾ ಜತೆಯಲ್ಲಿ ಮೊಹಮ್ಮದ್ ಹನೀಫ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರೈಫಲ್‌ಮ್ಯಾನ್ ಆಗಿದ್ದ ಔರಂಗಜೇಬ್ ತಂದೆಯಾಗಿರುವ ಹನೀಫ್ ರಾಜೌರಿ ನಿವಾಸಿಯಾಗಿದ್ದಾರೆ. ಪಕ್ಷಕ್ಕೆ ಸ್ವಾಗತಿಸಿದ ಪ್ರಧಾನಿಗೆ ಹನೀಫ್ ತನ್ನ ಹುತಾತ್ಮ ಪುತ್ರನ ಚಿತ್ರ ನೀಡಿದರು.

ಈ ಹತ್ಯೆಗೆ ಕಾರಣವಾದ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಲು ಔರಂಗಜೇಬ್‌ರ ಸ್ನೇಹಿತರು ಹಾಗೂ ಸಂಬಂಧಿಕರು ಗಲ್ಫ್‌ ರಾಷ್ಟ್ರಗಳಿಂದ ವಾಪಸಾಗುತ್ತಿದ್ದಾರೆ. ಅಲ್ಲದೆ, ಭದ್ರತಾ ಪಡೆಗಳೊಂದಿಗೆ ಕೈಜೋಡಿಸಲು ಇವರು ಮುಂದಾಗಿದ್ದಾರೆ.

ಬಿಜೆಪಿ ಬಡವರ ಪರ ಚಿಂತನೆಯನ್ನು ಹೊಂದಿರುವ ಕಾರಣಕ್ಕೆ ನಾನು ಈ ಪಕ್ಷ ಸೇರುತ್ತಿದ್ದೇನೆ. ಈ ಹಿಂದಿನ ಸರಕಾರಗಳಿಗಿಂತ ವಿಭಿನ್ನವಾಗಿರುವ ಮೋದಿ ಸರಕಾರ ಬಡವರ ಕಲ್ಯಾಣಕ್ಕೆ ಸದಾ ತತ್ಪರವಾಗಿದೆ, ಎಂದು ಹನೀಫ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

3 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

4 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

4 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

7 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

7 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

7 hours ago