ವಾಶಿಂಗ್ಟನ್ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಪಾಕ್ ಪ್ರೇರಿತ ಉಗ್ರನಿಂದ ಆತ್ಮಾಹುತಿ ದಾಳಿ ನಡೆದ ಬಳಿಕ ವಿಶ್ವದ ಬಹುತೇಕ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿವೆ. ಉಗ್ರರ ದಮನಕ್ಕೆ ಭಾರತ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ನಮ್ಮ ಬೆಂಬಲವಿದೆ ಎಂದು ಈ ರಾಷ್ಟ್ರಗಳು ತಿಳಿಸಿವೆ. ಧಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ಥಾನಕ್ಕೆ ಸೂಕ್ತ ಎದಿರೇಟು ನೀಡಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ಕೊಟ್ಟಿದ್ದಾರೆ.
ಭಾರತ ಈಗಾಗಲೇ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಸಂದೇಶವನ್ನು ರವಾನಿಸಿದೆ.
ಈ ಮಧ್ಯೆ ಭಾರತದ ಬೆಂಬಲಕ್ಕೆ ನಿಂತಿರುವ ವಿಶ್ವದ ದೊಡ್ಡಣ್ಣ ಅಮೆರಿಕಾ, ಉಗ್ರರಿಗೆ ಆಶ್ರಯ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಪಾಕಿಸ್ತಾನಕ್ಕೆ ತಾಕೀತು ಮಾಡಿದೆ. ಜೊತೆಗೆ ಪಾಕಿಸ್ತಾನಕ್ಕೆ ನೀಡಲು ನಿರ್ಧರಿಸಿದ್ದ 1.3 ಬಿಲಿಯನ್ ಡಾಲರ್ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿದ್ದು, ಇದು ಈಗಾಗಲೇ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಪಾಕಿಸ್ತಾನಕ್ಕೆ ದೊಡ್ಡ ಶಾಕ್ ನೀಡಿದಂತಾಗಿದೆ.
“ಪಾಕಿಸ್ಥಾನಕ್ಕೆ ಬಲವಾದ ಎದಿರೇಟು ನೀಡಲು ಭಾರತವು ಯೋಚಿಸುತ್ತಿದೆ. ಐವತ್ತು ಸೈನಿಕರನ್ನು ಕಳಕೊಂಡ ಧುಃಖ ಹಾಗೂ ರೋಷ ಅವರಿಗಿದೆ. ನಾನೂ ಭಾರತದ ಈಗಿನ ಮನೋಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತೇನೆ. ಆದುದರಿಂದ ಭಾರತ ಹಾಗೂ ಪಾಕಿಸ್ಥಾನದೊಂದಿಗೆ ಅಮೆರಿಕಾ ನಿರಂತರ ಸಂಪರ್ಕ ನಿರತವಾಗಿದೆ” ಟ್ರಂಪ್ ಸೂಚಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…