ವಾಶಿಂಗ್ಟನ್ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಪಾಕ್ ಪ್ರೇರಿತ ಉಗ್ರನಿಂದ ಆತ್ಮಾಹುತಿ ದಾಳಿ ನಡೆದ ಬಳಿಕ ವಿಶ್ವದ ಬಹುತೇಕ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿವೆ. ಉಗ್ರರ ದಮನಕ್ಕೆ ಭಾರತ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ನಮ್ಮ ಬೆಂಬಲವಿದೆ ಎಂದು ಈ ರಾಷ್ಟ್ರಗಳು ತಿಳಿಸಿವೆ. ಧಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ಥಾನಕ್ಕೆ ಸೂಕ್ತ ಎದಿರೇಟು ನೀಡಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ಕೊಟ್ಟಿದ್ದಾರೆ.
ಭಾರತ ಈಗಾಗಲೇ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಸಂದೇಶವನ್ನು ರವಾನಿಸಿದೆ.
ಈ ಮಧ್ಯೆ ಭಾರತದ ಬೆಂಬಲಕ್ಕೆ ನಿಂತಿರುವ ವಿಶ್ವದ ದೊಡ್ಡಣ್ಣ ಅಮೆರಿಕಾ, ಉಗ್ರರಿಗೆ ಆಶ್ರಯ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಪಾಕಿಸ್ತಾನಕ್ಕೆ ತಾಕೀತು ಮಾಡಿದೆ. ಜೊತೆಗೆ ಪಾಕಿಸ್ತಾನಕ್ಕೆ ನೀಡಲು ನಿರ್ಧರಿಸಿದ್ದ 1.3 ಬಿಲಿಯನ್ ಡಾಲರ್ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿದ್ದು, ಇದು ಈಗಾಗಲೇ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಪಾಕಿಸ್ತಾನಕ್ಕೆ ದೊಡ್ಡ ಶಾಕ್ ನೀಡಿದಂತಾಗಿದೆ.
“ಪಾಕಿಸ್ಥಾನಕ್ಕೆ ಬಲವಾದ ಎದಿರೇಟು ನೀಡಲು ಭಾರತವು ಯೋಚಿಸುತ್ತಿದೆ. ಐವತ್ತು ಸೈನಿಕರನ್ನು ಕಳಕೊಂಡ ಧುಃಖ ಹಾಗೂ ರೋಷ ಅವರಿಗಿದೆ. ನಾನೂ ಭಾರತದ ಈಗಿನ ಮನೋಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತೇನೆ. ಆದುದರಿಂದ ಭಾರತ ಹಾಗೂ ಪಾಕಿಸ್ಥಾನದೊಂದಿಗೆ ಅಮೆರಿಕಾ ನಿರಂತರ ಸಂಪರ್ಕ ನಿರತವಾಗಿದೆ” ಟ್ರಂಪ್ ಸೂಚಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…