ಉಡುಪಿ: ಕೇಂದ್ರ ಸರಕಾರ, ಸೇನೆ ಉಗ್ರರಿಗೆ ಮರೆಯಲಾಗದ ಪಾಠ ಕಲಿಸಬೇಕು, ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 43ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದುಃಖ ತಂದಿದೆ. ಚಿರ ಶಾಂತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವೆ. ಯುದ್ಧವಾದರೆ ಸಾವಿರಾರು ಜನ ಬಲಿಯಾಗುತ್ತಾರೆ. ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಕೂಡ ಯುದ್ಧಕ್ಕೆ ಕಾರಣವಾಗಬಾರದು ಎಂದರು.
ದೇಶಕ್ಕಾಗಿ ಪ್ರಾಣತಾಗ್ಯ ಮಾಡಿದವರಿಗೆ ಒಬ್ಬ ಯೋಗಿಗೆ ದೊರೆಯುವ ಫಲವೇ ದೊರೆಯುವುದು ಎಂದು ನಮ್ಮ ವೇದಪುರಾಣಗಳು ಹೇಳುತ್ತವೆ. ಹುತಾತ್ಮರಿಗೆ ದೇವರು ಸದ್ಗತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಪೇಜಾವರ ಶ್ರೀ ಹೇಳಿದರು.
ಕೇಂದ್ರ ಸರಕಾರ ಆ ಭಯೋತ್ಪಾದಕರಿಗೆ ಮರೆಯದ ಪಾಠ ಕಲಿಸಲಿ, ಆದರೆ ಯುದ್ದವಾಗುವ ರೀತಿ ಇರಬಾರದು. ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಸರ್ಜಿಕಲ್ ಸ್ಟೈಕ್ ರೀತಿಯ ಒಂದು ಪ್ರಯೋಗವಾಗಿರಬಹುದು ಅಥವಾ ಭಯೋತ್ಪಾದಕರಿಗೆ ಒಂದು ಸಣ್ಣ ಶಾಕ್ ಕೊಡುವಂತಿರಬೇಕು. ಆದರೆ ಯುದ್ದಕ್ಕೆ ಆಹ್ವಾನ ಕೊಡುವಂತಿರಬಾರದು, ಎಂದು ಶ್ರೀಗಳು ಉಗ್ರರ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…