Featured

ಉಗ್ರರಿಗೆ ಮರೆಯಲಾಗದ ಪಾಠ ಕಲಿಸಿ , ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು : ಪೇಜಾವರ ಶ್ರೀ – Vishwanews24

ಉಡುಪಿ: ಕೇಂದ್ರ ಸರಕಾರ, ಸೇನೆ ಉಗ್ರರಿಗೆ ಮರೆಯಲಾಗದ ಪಾಠ ಕಲಿಸಬೇಕು, ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 43ಮಂದಿ ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದುಃಖ ತಂದಿದೆ. ಚಿರ ಶಾಂತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವೆ. ಯುದ್ಧವಾದರೆ ಸಾವಿರಾರು ಜನ ಬಲಿಯಾಗುತ್ತಾರೆ. ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಕೂಡ ಯುದ್ಧಕ್ಕೆ ಕಾರಣವಾಗಬಾರದು ಎಂದರು.

ದೇಶಕ್ಕಾಗಿ ಪ್ರಾಣತಾಗ್ಯ ಮಾಡಿದವರಿಗೆ ಒಬ್ಬ ಯೋಗಿಗೆ ದೊರೆಯುವ ಫಲವೇ ದೊರೆಯುವುದು ಎಂದು ನಮ್ಮ ವೇದಪುರಾಣಗಳು ಹೇಳುತ್ತವೆ. ಹುತಾತ್ಮರಿಗೆ ದೇವರು ಸದ್ಗತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಪೇಜಾವರ ಶ್ರೀ ಹೇಳಿದರು.

ಕೇಂದ್ರ ಸರಕಾರ ಆ ಭಯೋತ್ಪಾದಕರಿಗೆ ಮರೆಯದ ಪಾಠ ಕಲಿಸಲಿ, ಆದರೆ ಯುದ್ದವಾಗುವ ರೀತಿ ಇರಬಾರದು. ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಸರ್ಜಿಕಲ್ ಸ್ಟೈಕ್ ರೀತಿಯ ಒಂದು ಪ್ರಯೋಗವಾಗಿರಬಹುದು ಅಥವಾ ಭಯೋತ್ಪಾದಕರಿಗೆ ಒಂದು ಸಣ್ಣ ಶಾಕ್ ಕೊಡುವಂತಿರಬೇಕು. ಆದರೆ ಯುದ್ದಕ್ಕೆ ಆಹ್ವಾನ ಕೊಡುವಂತಿರಬಾರದು, ಎಂದು ಶ್ರೀಗಳು ಉಗ್ರರ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago