ಉಡುಪಿ: ಕೇಂದ್ರ ಸರಕಾರ, ಸೇನೆ ಉಗ್ರರಿಗೆ ಮರೆಯಲಾಗದ ಪಾಠ ಕಲಿಸಬೇಕು, ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 43ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದುಃಖ ತಂದಿದೆ. ಚಿರ ಶಾಂತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವೆ. ಯುದ್ಧವಾದರೆ ಸಾವಿರಾರು ಜನ ಬಲಿಯಾಗುತ್ತಾರೆ. ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಕೂಡ ಯುದ್ಧಕ್ಕೆ ಕಾರಣವಾಗಬಾರದು ಎಂದರು.
ದೇಶಕ್ಕಾಗಿ ಪ್ರಾಣತಾಗ್ಯ ಮಾಡಿದವರಿಗೆ ಒಬ್ಬ ಯೋಗಿಗೆ ದೊರೆಯುವ ಫಲವೇ ದೊರೆಯುವುದು ಎಂದು ನಮ್ಮ ವೇದಪುರಾಣಗಳು ಹೇಳುತ್ತವೆ. ಹುತಾತ್ಮರಿಗೆ ದೇವರು ಸದ್ಗತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಪೇಜಾವರ ಶ್ರೀ ಹೇಳಿದರು.
ಕೇಂದ್ರ ಸರಕಾರ ಆ ಭಯೋತ್ಪಾದಕರಿಗೆ ಮರೆಯದ ಪಾಠ ಕಲಿಸಲಿ, ಆದರೆ ಯುದ್ದವಾಗುವ ರೀತಿ ಇರಬಾರದು. ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಸರ್ಜಿಕಲ್ ಸ್ಟೈಕ್ ರೀತಿಯ ಒಂದು ಪ್ರಯೋಗವಾಗಿರಬಹುದು ಅಥವಾ ಭಯೋತ್ಪಾದಕರಿಗೆ ಒಂದು ಸಣ್ಣ ಶಾಕ್ ಕೊಡುವಂತಿರಬೇಕು. ಆದರೆ ಯುದ್ದಕ್ಕೆ ಆಹ್ವಾನ ಕೊಡುವಂತಿರಬಾರದು, ಎಂದು ಶ್ರೀಗಳು ಉಗ್ರರ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…