ಉಡುಪಿ: ಕೇಂದ್ರ ಸರಕಾರ, ಸೇನೆ ಉಗ್ರರಿಗೆ ಮರೆಯಲಾಗದ ಪಾಠ ಕಲಿಸಬೇಕು, ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 43ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದುಃಖ ತಂದಿದೆ. ಚಿರ ಶಾಂತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವೆ. ಯುದ್ಧವಾದರೆ ಸಾವಿರಾರು ಜನ ಬಲಿಯಾಗುತ್ತಾರೆ. ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಕೂಡ ಯುದ್ಧಕ್ಕೆ ಕಾರಣವಾಗಬಾರದು ಎಂದರು.
ದೇಶಕ್ಕಾಗಿ ಪ್ರಾಣತಾಗ್ಯ ಮಾಡಿದವರಿಗೆ ಒಬ್ಬ ಯೋಗಿಗೆ ದೊರೆಯುವ ಫಲವೇ ದೊರೆಯುವುದು ಎಂದು ನಮ್ಮ ವೇದಪುರಾಣಗಳು ಹೇಳುತ್ತವೆ. ಹುತಾತ್ಮರಿಗೆ ದೇವರು ಸದ್ಗತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಪೇಜಾವರ ಶ್ರೀ ಹೇಳಿದರು.
ಕೇಂದ್ರ ಸರಕಾರ ಆ ಭಯೋತ್ಪಾದಕರಿಗೆ ಮರೆಯದ ಪಾಠ ಕಲಿಸಲಿ, ಆದರೆ ಯುದ್ದವಾಗುವ ರೀತಿ ಇರಬಾರದು. ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಸರ್ಜಿಕಲ್ ಸ್ಟೈಕ್ ರೀತಿಯ ಒಂದು ಪ್ರಯೋಗವಾಗಿರಬಹುದು ಅಥವಾ ಭಯೋತ್ಪಾದಕರಿಗೆ ಒಂದು ಸಣ್ಣ ಶಾಕ್ ಕೊಡುವಂತಿರಬೇಕು. ಆದರೆ ಯುದ್ದಕ್ಕೆ ಆಹ್ವಾನ ಕೊಡುವಂತಿರಬಾರದು, ಎಂದು ಶ್ರೀಗಳು ಉಗ್ರರ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…