Featured

ಉಗ್ರರ ದಾಳಿ ಖಂಡಿಸಿ ಫೆ. 19 ರಂದು ‘ಕರ್ನಾಟಕ ಬಂದ್’ ಗೆ ಕರೆ .. -Vishwanews24

ಬೆಂಗಳೂರು : ಪುಲ್ವಾಮ ಉಗ್ರರ ದಾಳಿ ಖಂಡಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಫೆ. 19 ರಂದು ಕರ್ನಾಟಕ ಬಂದ್ ಮಾಡುವುದಾಗಿ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ದಾಳಿಯಲ್ಲಿ ಯೋಧರ ಸಾವಿನಿಂದ ಭಾರತವೇ ಕಣ್ಣೀರುಡುತ್ತಿದೆ. ಭಾರತ ಸರ್ಕಾರಕ್ಕೆ ಇದೊಂದು ಚಾಲೆಂಜ್ ಆಗಿದೆ. ನಾವು ಮನಸು ಮಾಡಿದರೆ ಉಗ್ರ ಸಂಘಟನೆಯನ್ನು ಪುಡಿ ಮಾಡುವ ಶಕ್ತಿ ಇದೆ. 49 ಯೋಧರ ಪ್ರಾಣ ಕಳೆದುಕೊಂಡಿದ್ದಾರೆ. ಇಂಟೆಲಿಜೆನ್ಸ್ ಏನಾಗಿದೆ. ವಾಹನ ಬಂದು ಡಿಕ್ಕಿ ಹೊಡೆದರೂ ಯಾಕೆ ನೋಡ್ಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಆರು ಕೋಟಿ ಕನ್ನಡಿಗರು ಉಗ್ರರ ವಿರುದ್ದ ಪ್ರತೀಕಾರಕ್ಕಾಗಿ ಕಾಯುತ್ತಾ ಇದ್ದಾರೆ. ಪಕ್ಷ ಭೇದ ಮರೆತು ಎಲ್ಲಾ ಪಕ್ಷಗಳು ಒಂದಾಗಿವೆ. ಈ ಕೃತ್ಯ ಖಂಡಿಸಿ ಭಯೋತ್ಪಾದನೆ ಇರಬಾರದು ಎಂದು ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಿದರು.

ಅಂದು ಬೆಳಗ್ಗೆ 6ರಿಂದ ಸಂಜೆಯವರೆಗೂ ಬಂದ್ ನಡೆಯಲಿದೆ. ಆಸ್ಪತ್ರೆ, ಮಾಧ್ಯಮಗಳು, ಔಷಧಿ, ಹಾಲು ಮಾರಾಟಕ್ಕೆ ವಿನಾಯಿತಿ ಇರುತ್ತದೆ. ಬಸ್‌ಗಳು, ಸಿನಿಮಾ, ಖಾಸಗಿ ವಾಹನಗಳು ಬಂದ್ ಆಗಲಿವೆ. ಹೋಟೆಲ್‌, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಶಾಲಾ ಕಾಲೇಜ್ ಬಂದ್ ಆಗಲಿವೆ ಎಂದು ಹೇಳಿದರು.

ಬಿಡಿಎ, ಬಿಬಿಎಂಪಿ ಎಲ್ಲಾ ಕಾರ್ಖಾನೆಗಳು, ಐಟಿ-ಬಿಟಿ ಬಂದ್ ಆಗಬೇಕು. ಆದರೆ, ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಅಂದು ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ವಾಟಾಳ್‌ ಮನವಿ ಮಾಡಿದರು.

ಕೈಗಾರಿಕಾ ಸಂಘಟನೆಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಸಂಘ, ಸರ್ಕಾರಿ ನೌಕರರ ಸಂಘ, ರಸ್ತೆ ಸಾರಿಗೆ ಸಂಸ್ಥೆ ಕಾರ್ಮಿಕರ ಸಂಘ ಸೇರಿದಂತೆ ಹಲವು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

 

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

3 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

4 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

4 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

5 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

5 hours ago