Featured

ಉಗ್ರರ ದಾಳಿ ಖಂಡಿಸಿ ಫೆ. 19 ರಂದು ‘ಕರ್ನಾಟಕ ಬಂದ್’ ಗೆ ಕರೆ .. -Vishwanews24

ಬೆಂಗಳೂರು : ಪುಲ್ವಾಮ ಉಗ್ರರ ದಾಳಿ ಖಂಡಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಫೆ. 19 ರಂದು ಕರ್ನಾಟಕ ಬಂದ್ ಮಾಡುವುದಾಗಿ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ದಾಳಿಯಲ್ಲಿ ಯೋಧರ ಸಾವಿನಿಂದ ಭಾರತವೇ ಕಣ್ಣೀರುಡುತ್ತಿದೆ. ಭಾರತ ಸರ್ಕಾರಕ್ಕೆ ಇದೊಂದು ಚಾಲೆಂಜ್ ಆಗಿದೆ. ನಾವು ಮನಸು ಮಾಡಿದರೆ ಉಗ್ರ ಸಂಘಟನೆಯನ್ನು ಪುಡಿ ಮಾಡುವ ಶಕ್ತಿ ಇದೆ. 49 ಯೋಧರ ಪ್ರಾಣ ಕಳೆದುಕೊಂಡಿದ್ದಾರೆ. ಇಂಟೆಲಿಜೆನ್ಸ್ ಏನಾಗಿದೆ. ವಾಹನ ಬಂದು ಡಿಕ್ಕಿ ಹೊಡೆದರೂ ಯಾಕೆ ನೋಡ್ಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಆರು ಕೋಟಿ ಕನ್ನಡಿಗರು ಉಗ್ರರ ವಿರುದ್ದ ಪ್ರತೀಕಾರಕ್ಕಾಗಿ ಕಾಯುತ್ತಾ ಇದ್ದಾರೆ. ಪಕ್ಷ ಭೇದ ಮರೆತು ಎಲ್ಲಾ ಪಕ್ಷಗಳು ಒಂದಾಗಿವೆ. ಈ ಕೃತ್ಯ ಖಂಡಿಸಿ ಭಯೋತ್ಪಾದನೆ ಇರಬಾರದು ಎಂದು ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಿದರು.

ಅಂದು ಬೆಳಗ್ಗೆ 6ರಿಂದ ಸಂಜೆಯವರೆಗೂ ಬಂದ್ ನಡೆಯಲಿದೆ. ಆಸ್ಪತ್ರೆ, ಮಾಧ್ಯಮಗಳು, ಔಷಧಿ, ಹಾಲು ಮಾರಾಟಕ್ಕೆ ವಿನಾಯಿತಿ ಇರುತ್ತದೆ. ಬಸ್‌ಗಳು, ಸಿನಿಮಾ, ಖಾಸಗಿ ವಾಹನಗಳು ಬಂದ್ ಆಗಲಿವೆ. ಹೋಟೆಲ್‌, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಶಾಲಾ ಕಾಲೇಜ್ ಬಂದ್ ಆಗಲಿವೆ ಎಂದು ಹೇಳಿದರು.

ಬಿಡಿಎ, ಬಿಬಿಎಂಪಿ ಎಲ್ಲಾ ಕಾರ್ಖಾನೆಗಳು, ಐಟಿ-ಬಿಟಿ ಬಂದ್ ಆಗಬೇಕು. ಆದರೆ, ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಅಂದು ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ವಾಟಾಳ್‌ ಮನವಿ ಮಾಡಿದರು.

ಕೈಗಾರಿಕಾ ಸಂಘಟನೆಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಸಂಘ, ಸರ್ಕಾರಿ ನೌಕರರ ಸಂಘ, ರಸ್ತೆ ಸಾರಿಗೆ ಸಂಸ್ಥೆ ಕಾರ್ಮಿಕರ ಸಂಘ ಸೇರಿದಂತೆ ಹಲವು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

 

Vishwa News 24

Recent Posts

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

30 minutes ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

34 minutes ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago