ಅಯೋಧ್ಯೆ: ಉತ್ತರಪ್ರದೇಶದಲ್ಲಿರುವ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭದ್ರತಾ ಏಜೆನ್ಸಿಗಳು ಮತ್ತು ಗುಪ್ತಚರ ಇಲಾಖೆ ಉಗ್ರರು ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ ಬೆನ್ನಲ್ಲೇ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಗುಪ್ತಚರ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಉಗ್ರರು ನೇಪಾಳದಿಂದ ಉತ್ತರಪ್ರದೇಶವನ್ನು ತಲುಪುವ ಸಾಧ್ಯತೆಯಿದ್ದು, ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು ಮತ್ತು ಬಸ್ಸುಗಳನ್ನು ಗುರಿಯಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬೆನ್ನಲ್ಲೇ ಅಯೋಧ್ಯೆಗೆ ಬರುವ ಎಲ್ಲಾ ವಾಹನಗಳು, ಅಲ್ಲಿನ ಹೋಟೆಲ್ ಮತ್ತು ಅತಿಥಿ ಗೃಹಗಳ ತಪಾಸಣೆ ನಡೆಸಲಾಗುತ್ತಿದೆ.
ಗಣ್ಯರು ವಾರಾಂತ್ಯದಲ್ಲಿ ರಾಮಮಂದಿರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾನುವಾರ ಶಿವಸೇನೆಯ 18 ಸಂಸದರೊಂದಿಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಮಮದಿರಕ್ಕೆ ಭೇಟಿ ನೀಡಲಿದ್ದಾರೆ.
ಈಗಾಗಲೇ ಭಯೋತ್ಪಾದಕರ ಇರುವಿಕೆ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಲ್ಲಾಗಿದ್ದು, ಆ ವರದಿಯಲ್ಲಿ ಲಷ್ಕರ್-ಎ-ತೊಯ್ಬಾ ಸೇರಿದಂತೆ ಇತರ ಸಂಘಟನೆಗಳು ಉತ್ತ್ರಪ್ರದೆಶ್ದ ಫೈಜಾಬಾದ್ ಮತ್ತು ಗೋರಖ್’ಪುರದಲ್ಲಿ ರಹಸ್ಯವಾಗಿ ತಮ್ಮ ನೆಲೆಗಳನ್ನು ಸ್ಥಾಪಿಸುತ್ತಿವೆ. ಈ ನಗರಗಳಲ್ಲಿ ಭಯೋತ್ಪಾದಕ ನೆಲೆಗಳನ್ನು ಸ್ಥಾಪಿಸುವ ಮತ್ತು ಯುವಕರನ್ನು ನೇಮಕ ಮಾಡುವ ಜವಾಬ್ದಾರಿಯನ್ನು ಮೊಹಮ್ಮದ್ ಉಮರ್ ಮಡ್ನಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…