ಮಂಗಳೂರು : ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಪುತ್ರನ ಮನೆಗೆ ಮತ್ತೆ ಎನ್ ಐಎ ದಾಳಿ ನಡೆಸಿದ್ದು. ಉಗ್ರ ಸಂಘಟನೆ ಐಸಿಸ್ ಜೊತೆ ನಂಟಿನ ಶಂಕೆ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಪುತ್ರ ಬಿ.ಎಂ.ಭಾಷಾ ಸೊಸೆ ದೀಪ್ತಿ ಆಲಿಯಾಸ್ ಮರಿಯಂ ಎನ್ ಐಎ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯ ಮನೆಯಲ್ಲಿ ಅವರನ್ನು ವಶಕ್ಕೆ ಪಡೆದ ಎನ್ಐಎ, ಬಳಿಕ ಮಂಗಳೂರಿನ ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿ ನೇರವಾಗಿ ದೆಹಲಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.
ಈ ಹಿಂದೆ ಅಗಸ್ಟ್ 4ರಂದು ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು, ಅಂದು ಎರಡು ದಿನಗಳ ದಾಳಿಯ ಬಳಿಕ ಬಾಷಾ ಕಿರಿಯ ಪುತ್ರ ಅಬ್ದುಲ್ ರೆಹಮಾನ್ ಬಂಧಿಸಿದ್ದರು, ಈ ವೇಳೆ ಬಾಷಾರ ಮತ್ತೊಬ್ಬ ಪುತ್ರ ಅನಾಸ್ ಪತ್ನಿ ದೀಪ್ತಿ ಆಲಿಯಾಸ್ ಮರಿಯಂ ಮೇಲೆ ಅನುಮಾನ ಬಂದಿತ್ತು. ಆದರೆ ಸಣ್ಣ ಮಗುವಿದ್ದ ಕಾರಣ ಕೇವಲ ವಿಚಾರಣೆ ನಡೆಸಿ ಬಿಟ್ಟಿದ್ದ ಎನ್ ಐಎ. ಇದೀಗ ಮತ್ತೆ ಮನೆಗೆ ಎನ್ ಐಎ ದಾಳಿ ನಡೆಸಿ ದೀಪ್ತಿ ಆಲಿಯಾಸ್ ಮರಿಯಂ ಬಂಧಿಸಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವಳಾದ ದೀಪ್ತಿ ಮರಿಯಂ ಅವರು ಅನಾಸ್ ಅವರನ್ನು ಪ್ರೀತಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಮದುವೆಯಾಗಿದ್ದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…