ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ.
ಕಾಪು: ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಸಂಚರಿಸುವ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ವಿತರಿಸಬೇಕು ಎಂದು ಆಗ್ರಹಿಸಿ ಕಾಪು ತಾಲ್ಲೂಕು ಎಬಿವಿಪಿ ಘಟಕದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಹಳೇ ಮಾರಿಯಮ್ಮ ದೇವಸ್ಥಾನದ ಸ್ವಾಗತ ಗೋಪುರದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ, ಕಾಪು ಪೇಟೆಯನ್ನ ಸಾಗಿ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಸಿದರು.
ಎಬಿವಿಪಿ ಜಿಲ್ಲಾ ಕಾರ್ಯದರ್ಶಿ ರಕ್ಷಿತ್ ಭಂಡಾರಿ ಮಾತಾಡಿ ” ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಉಚಿತ ಪಾಸ್ ನೀಡಬೇಕು, ವಿಧ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುವುದನ್ನ ಸರ್ಕಾರ ಈ ಕೂಡಲೇ ನಿಲ್ಲಿಸಬೇಕು ಮತ್ತು ಹಾಸ್ಟೇಲ್ ಗಳ ಸಮಸ್ಯೆ ಹಾಗೂ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ ಮಾಡಬೇಕೆಂದು ಆಗ್ರಹಿಸಿದರು.ಸರ್ಕಾರ ನಮಗೆ ಸ್ಪಂದಿಸದೆ ಇದ್ದಲ್ಲಿ ವಿಧಾನಸೌದಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.
ವಿಧ್ಯಾರ್ಥಿ ಪ್ರಮುಖರಾದ ಉಮೇಸ್ ಕಾಪು, ವಿನಿತ್ ಪೂಜಾರಿ, ರಂಜೀತ್ , ಪೂಜಾ, ಪ್ರಜ್ಞಾ,ಸೇರಿದಂತೆ ನೂರಾರು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…