ತುಮಕೂರು: “ಜನರು ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು” ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದರು.
ಇನ್ನು ಉಚಿತ ಭಾಗ್ಯ ಮುಂದುವರಿದರೆ ಚುನಾವಣೆ ಮಾಡುವುದು ತುಂಬಾ ಕಷ್ಟವಾಗುತ್ತೆ. ರಾಜ್ಯದ ತೆರಿಗೆದಾರರ ದುಡ್ಡು ಇಷ್ಟಬಂದ ಹಾಗೇ ಹಂಚುತ್ತೇನೆ ಅಂದರೇ ಮನೆಯಲ್ಲಿ ಕೂತವರಿಗೆ ಹಂಚುತ್ತೇನೆ ಅಂದ್ರೆ ರಾಜ್ಯದ ಪರಿಸ್ಥಿತಿ ಏನಾಗಬೇಡ ಎಂದಿದ್ದಾರೆ.
ದಾಸ್ತಾನು ಇರುವ ಅಕ್ಕಿ ಬರಗಾಲ, ಅತಿವೃಷ್ಟಿ ಸಂದರ್ಭದಲ್ಲಿ ನೀಡುತ್ತಾರೆ. ನಮ್ಮಲ್ಲಿ ಅಕ್ಕಿ ಇದೆ ಎಂದು ಹೇಳಿ ಬೇಕಾಬಿಟ್ಟಿ ಹಂಚೋಕಾಗುತ್ತಾ? ಕರ್ನಾಟಕಕ್ಕೆ ಅಂತಹ ಪರಿಸ್ಥಿತಿ ಬಂದರೇ ಮೋದಿ ಅಕ್ಕಿ ಕೊಟ್ಟೇ ಕೊಡುತ್ತಾರೆ ಎಂದು ಹೇಳಿದ್ದಾರೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…