Featured

ಉಚಿತ ಲಸಿಕೆ, ಇತರ ಯೋಜನೆಗಳಿಗೆ ಇಂಧನದ ಮೇಲಿನ ತೆರಿಗೆ ಹಣ ಬಳಕೆ : ಹರ್‌ದೀಪ್‌‌ ಸಿಂಗ್‌ ಪುರಿ – Vishwanews24

ಉಚಿತ ಲಸಿಕೆ, ಇತರ ಯೋಜನೆಗಳಿಗೆ ಇಂಧನದ ಮೇಲಿನ ತೆರಿಗೆ ಹಣ ಬಳಕೆ : ಹರ್‌ದೀಪ್‌‌ ಸಿಂಗ್‌ ಪುರಿ – Vishwanews24

ನವದೆಹಲಿ: “ಉಚಿತ ಲಸಿಕೆ ಸೇರಿದಂತೆ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉಚಿತ ಊಟ, ಅಡುಗೆ ಅನಿಲ ಹಾಗೂ ಇತರ ಯೋಜನೆಗಳಿಗಾಗಿ ಇಂಧನದ ಮೇಲೆ ವಿಧಿಸಿರುವ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಕೇಂದ್ರ ಇಂಧನ ಸಚಿವ ಹರ್‌ದೀಪ್‌‌ ಸಿಂಗ್‌ ಪುರಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಲೆ ಏರಿಕೆಯಾಗುತ್ತಿದೆ. ನೀವು ತೆರಿಗೆ ಇಳಿಸುತ್ತಿಲ್ಲವೇಕೆ? ಎನ್ನುವುದು ಭಾರತದಲ್ಲಿ ನಾವು ಕೇಳಬಹುದಾದ ಸರಳ ರಾಜಕೀಯ ನಿರೂಪಣೆಯಾಗಿದೆ. ಈ ಕಾರಣದಿಂದ ಪ್ರತಿಭಾರಿ ಬೆಲೆ ಏರಿಕೆಯಾದ ಸಂದರ್ಭ ಅದು ನಮ್ಮ ಬುಡಕ್ಕೆ ನಾವೇ ಕೊಡಲಿ ಹಾಕಿಕೊಳ್ಳುವ ಸ್ಥಿತಿಯನ್ನು ತಂದಿಡುತ್ತದೆ” ಎಂದು ಹೇಳಿದ್ದಾರೆ.

“ನಿನ್ನೆ ಶತಕೋಟಿ ಡೋಸ್‌ ಕೊರೊನಾ ಲಸಿಕೆ ವಿತರಣೆಯ ಗುರಿ ತಲುಪಿದ್ದೇವೆ. ಒಂದು ವರ್ಷ 90 ಕೋಟಿ ಮಂದಿಗೆ ಆಹಾರ ಪೂರೈಸಿದ್ದೇವೆ. ಉಜ್ವಲ ಯೋಜನೆಯನ್ನೂ ನೀಡಿದ್ದೇವೆ. ಕೇಂದ್ರ ಸರ್ಕಾರ ಹಲವು ಕಾರ್ಯಗಳು ಪ್ರತಿ ಲೀಟರ್‌ಗೆ ವಿಧಿಸಿರುವ 32 ರೂ. ತೆರಿಗೆಯಿಂದ ಸಾಧ್ಯವಾಗಿದೆ” ಎಂದಿದ್ದಾರೆ.

“ಬಡವರಿಗಾಗಿ ಮನೆ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ಸಮಾಜ ಕಲ್ಯಾಣ ಯೋಜನೆಗಾಗಿ ತೆರಿಗೆ ಹಣ ಬಳಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

11 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

13 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

13 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

14 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

14 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

14 hours ago