ನವದೆಹಲಿ: “ಉಚಿತ ಲಸಿಕೆ ಸೇರಿದಂತೆ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉಚಿತ ಊಟ, ಅಡುಗೆ ಅನಿಲ ಹಾಗೂ ಇತರ ಯೋಜನೆಗಳಿಗಾಗಿ ಇಂಧನದ ಮೇಲೆ ವಿಧಿಸಿರುವ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಲೆ ಏರಿಕೆಯಾಗುತ್ತಿದೆ. ನೀವು ತೆರಿಗೆ ಇಳಿಸುತ್ತಿಲ್ಲವೇಕೆ? ಎನ್ನುವುದು ಭಾರತದಲ್ಲಿ ನಾವು ಕೇಳಬಹುದಾದ ಸರಳ ರಾಜಕೀಯ ನಿರೂಪಣೆಯಾಗಿದೆ. ಈ ಕಾರಣದಿಂದ ಪ್ರತಿಭಾರಿ ಬೆಲೆ ಏರಿಕೆಯಾದ ಸಂದರ್ಭ ಅದು ನಮ್ಮ ಬುಡಕ್ಕೆ ನಾವೇ ಕೊಡಲಿ ಹಾಕಿಕೊಳ್ಳುವ ಸ್ಥಿತಿಯನ್ನು ತಂದಿಡುತ್ತದೆ” ಎಂದು ಹೇಳಿದ್ದಾರೆ.
“ನಿನ್ನೆ ಶತಕೋಟಿ ಡೋಸ್ ಕೊರೊನಾ ಲಸಿಕೆ ವಿತರಣೆಯ ಗುರಿ ತಲುಪಿದ್ದೇವೆ. ಒಂದು ವರ್ಷ 90 ಕೋಟಿ ಮಂದಿಗೆ ಆಹಾರ ಪೂರೈಸಿದ್ದೇವೆ. ಉಜ್ವಲ ಯೋಜನೆಯನ್ನೂ ನೀಡಿದ್ದೇವೆ. ಕೇಂದ್ರ ಸರ್ಕಾರ ಹಲವು ಕಾರ್ಯಗಳು ಪ್ರತಿ ಲೀಟರ್ಗೆ ವಿಧಿಸಿರುವ 32 ರೂ. ತೆರಿಗೆಯಿಂದ ಸಾಧ್ಯವಾಗಿದೆ” ಎಂದಿದ್ದಾರೆ.
“ಬಡವರಿಗಾಗಿ ಮನೆ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ಸಮಾಜ ಕಲ್ಯಾಣ ಯೋಜನೆಗಾಗಿ ತೆರಿಗೆ ಹಣ ಬಳಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…