Featured

ಉಚ್ಚಿಲ‌ ಶ್ರೀಮಹಾಲಕ್ಷ್ಮಿ‌ಯ ದರ್ಶನ ಪಡೆದ ಬಿಎಸ್ ವೈ , ಜೀರ್ಣೋದ್ಧಾರ ಕಾರ್ಯಗಳಿಗೆ ಸಹಕರಿಸಲು‌ ಮನವಿ -Vishwanews24

ಉಚ್ಚಿಲ‌ ಶ್ರೀಮಹಾಲಕ್ಷ್ಮಿ‌ಯ ದರ್ಶನ ಪಡೆದ ಬಿಎಸ್ ವೈ , ದೇವಸ್ಥಾನದ ಜೀರ್ಣೋದ್ಧಾರಕ್ಕೆಹೆಚ್ಚುವರಿ 10 ಕೋಟಿ ರೂಪಾಯಿ ಬಿಡುಗಡೆಗೆ ಮನವಿ -Vishwanews24

ಉಡುಪಿ: ಎರಡೂವರೆ ವರ್ಷಗಳ ಆಡಳಿತ ಯಾವುದೇ ಅಡ್ಡಿ, ಆತಂಕವಿಲ್ಲದೆ ನಡೆಸಲು ಅನುಗ್ರಹಿಸುವಂತೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ‌ ಶ್ರೀಮಹಾಲಕ್ಷ್ಮಿ‌ ದೇವರ ಬಳಿ ಭಕ್ತಿ, ತನ್ಮಯತೆಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಪ್ರಾರ್ಥನೆ, ಪೂಜೆ ಸಲ್ಲಿಸಿದರು.

ದೇವಳದ ಜೀರ್ಣೋದ್ಧಾರಕ್ಕೆ ಐದು ಕೋಟಿ ರೂ.ಬಿಡುಗಡೆ, ಹತ್ತು ಕೋಟಿ ರೂ. ಮಂಜೂರಾತಿಗಾಗಿ ದೇವಳದ ಅರ್ಚಕ ರಾಘವೇಂದ್ರರವರು ಬಿಎಸ್ ವೈ ಅವರಿಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಇನ್ನಷ್ಟು ಕೊಡುಗೆ ಶ್ರೀಮಹಾಲಕ್ಷ್ಮಿಗೆ ಸಲ್ಲಲಿ. ಉದ್ಘಾಟನೆಗೂ ನೀವೇ ಬರಬೇಕು ಎಂದರು. ಬ್ರಾಹ್ಮಣರ ಅಭಿವೃದ್ಧಿಗೆ ಅನುದಾನ ಸ್ವಾಗತಾರ್ಹ ಇನ್ನೂ ಹತ್ತು ವರ್ಷ ಆಡಳಿತ ನಡೆಸಲು ಮಹಾಲಕ್ಷ್ಮಿ ಅನುಗ್ರಹಿಸಲಿ ಎಂದರು.

http://ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ವೈ ಭೇಟಿ

ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳಲಿರುವ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸಕ್ಕೆ ಈಗಾಗಲೇ 5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಹೆಚ್ಚುವರಿ 10 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಮಾಡಲಾಯಿತು.

ಸಂಸದೆ ಶೋಭಾ‌ ಕರಂದ್ಲಾಜೆ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ರಘುಪತಿ ಭಟ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯೆ ಶಿಲ್ಪಾ‌ ಜಿ. ಸುವರ್ಣ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್‌ನ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಸುರೇಶ್ ನಾಯಕ್, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಕುತ್ಯಾರು ನವೀನ್‌ ಶೆಟ್ಟಿ ಹಾಗೂ ಮೊಗವೀರ ಸಮಾಜದ ವಿವಿಧ ಮುಖಂಡರು, ಕ್ಷೇತ್ರಾಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಸಹಿತ ವಿವಿಧ ಉಪ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಕ ಮೊಗವೀರ ಮಹಾಜನ ಸಂಘದ ವತಿಯಿಂದ ಮನವಿ ಸ್ವೀಕರಿಸಿದ ಸಿಎಂ ಯಡಿಯೂರಪ್ಪ ಅವರನ್ನು ಬೆಳ್ಳು ಗಣಪತಿ ನೀಡಿ ಸನ್ಮಾನಿಸಲಾಯಿತು.

ಮಂಗಳೂರು: ಎಸ್‌ ಡಿಪಿಐ ಮುಖಂಡ ಸಿದ್ಧಿಕ್‌ ಉಳ್ಳಾಲ್‌ ಮೇಲೆ ಅತ್ಯಾಚಾರ ಮತ್ತು ಪೋಕ್ಸೋ ಕೇಸ್‌ ದಾಖಲು -Vishwanews24

 

 

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 hour ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 hour ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

2 hours ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

2 hours ago