ಪಡುಬಿದ್ರಿ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಸೆಪ್ಟೆಂಬರ್ 30ರಂದು ನಡೆದಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪುತ್ತೂರು ನೋಂದಣಿಯ ಬೈಕ್ನಲ್ಲಿ ಮೃತರಾದವರು ಉಡುಪಿಯಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಸಮಾಜ ಸೇವಕ ಜಮಾಲುದ್ದೀನ್ ಉಚ್ಚಿಲ, ಹಮೀದ್ ಮೂಳೂರು, ರಯೀಸ್, ರಝಾಕ್, ಅನ್ವರ್ ಕೋಟೇಶ್ವರ ಮತ್ತು ಸಾದಿಕ್ ಪಡುಬಿದ್ರಿ ಅವರು ಮೃತದೇಹವನ್ನು ಶವಾಗಾರಕ್ಕೆ ಸಾಗಿಸುವಲ್ಲಿ ನೆರವು ನೀಡಿದರು.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…