ಉಚ್ಚಿಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ಕಾಪು ವಿಧಾನ ಸಭಾ ಕ್ಷೇತ್ರ ವಲಯದ ವತಿಯಿಂದ ಸಾರ್ವಜನಿಕರಿ ಗಾಗಿ ಉಚ್ಚಿಲದಲ್ಲಿ ಉಚಿತ ಅಂಬುಲೆನ್ಸ್ ಲೋಕಾರ್ಪಣೆ ಸಮಾರಂಭ ನಡೆಯಿತು.
ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಯು. ಸೀತಾರಾಂ ಭಟ್ ಮಾತನಾಡಿ, ಜಾತಿ, ಧರ್ಮವು ನಾವು ಮಾಡಿಕೊಂಡ ಚೌಕಟ್ಟು. ಎಲ್ಲಾ ಧರ್ಮದ ಮೂಲ ಸಾರ ಕರುಣೆ, ತಾಳ್ಮೆ, ಸಹನೆಯ ಸಂದೇಶ ನೀಡುತ್ತದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ರಾಷ್ಟ್ರಿಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಮಾತನಾಡಿ, ಪ್ರೀತಿ, ಸಹೋದರತೆ, ಅನ್ಯೋನ್ಯತೆ, ಮಮತೆ, ಶಾಂತಿ, ತ್ಯಾಗಕ್ಕಾಗಿ ಸಂಸ್ಥೆ ಮುಂದಾಗಿದೆ ಎಂದರು.
ವೇದಿಕೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಎರ್ಮಾಳು ಜಾಮಿಶಾ ಮಸೀದಿಯ ಖತೀಬರಾದ ಶಬ್ಬೀರ್ ಫೈಝಿ, ಎರ್ಮಾಳು ಚರ್ಚ್ನ ಧರ್ಮಗುರುಗಳಾದ ಲಾರೆನ್ಸ್ ರಾಡ್ರಿಗಸ್, ಉಡುಪಿ ಜಿಲ್ಲಾ ಹೋಮ್ ಗಾರ್ಡ್ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ ಡಿ. ಸಾಲ್ಯಾನ್, ಮಹಮ್ಮದ್ ಇಕ್ಬಾಲ್, ಮಜೀದ್ ಪೊಲ್ಯ, ಹನೀಫ್ ಮೂಳೂರು, ಅಬ್ರಾರ್ ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…