ಉಚ್ಚಿಲ ಕೊರೋನಾ ಸೋಂಕು ಪಾಸಿಟಿವ್ ಬಂದ ವ್ಯಕ್ತಿಯನ್ನು ೨೪ ಗಂಟೆ ಕಳೆದರೂ ಆಸ್ಪತ್ರೆಗೆ ಸಾಗಿಸಲು ಇಲಾಖೆ ಹಿಂದೇಟು ಸ್ಥಳೀಯರ ಆಕ್ರೋಶ: vishwanews24

ಉಚ್ಚಿಲ ಕೊರೋನಾ ಸೋಂಕು ಪಾಸಿಟಿವ್ ಬಂದ ವ್ಯಕ್ತಿಯನ್ನು ೨೪ ಗಂಟೆ ಕಳೆದರೂ ಆಸ್ಪತ್ರೆಗೆ ಸಾಗಿಸಲು ಇಲಾಖೆ ಹಿಂದೇಟು ಸ್ಥಳೀಯರ ಆಕ್ರೋಶ: vishwanews24

ಕಾಪು : ಮಹಾರಾಷ್ಟ್ರದಿಂದ ಬಂದು 14 ದಿನ ಕ್ವಾರೆಂಟೈನ್ಗೆ ಒಳಪಟ್ಟು ಮನೆಗೆ ಬಂದ ವ್ಯಕ್ತಿಗೆ ಸೋಂಕು ದೃಢವಾದ ವರದಿ ಬಂದ ಹಿನ್ನೆಲೆ ಉಚ್ಚಿಲ ಪೊಲ್ಯ ರಸ್ತೆಯಲ್ಲಿರುವ ಅವರ ವಾಸದ ಅಪಾರ್ಟ್ಮೆಂಟ್  ಸೀಲ್ಢೌನ್ ಮಾಡಲಾಗಿದೆ.ಆದರೆ ಇದುವರೆಗೆ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿಲ್ಲ.ಅಲ್ಲದೆ ಅವರಿಗೆ ನಿನ್ನೆ ರಾತ್ರಿಯಿಂದ ಹೊಟ್ಟೆಗೆ ಅನ್ನ ಅಹಾರ ನೀಡಿಲ್ಲ.ನಮ್ಮನ್ನು ಸ್ಥಳೀಯ ಗ್ರಾ.ಪಂ ಅಧಿಕಾರಿಗಳು ನೋಡಲು ಬಂದಿಲ್ಲ ಎಂದು ಅವರ ಪತ್ನಿ ಆರೋಪಿಸಿದ್ದಾರೆ.ಇಲಾಖೆಯ ಮಾಹಿತಿಯಂತೆ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿರುವುದಾಗಿ ಪತ್ರಿಕೆಯಲ್ಲಿ ವರದಿಯಾಗಿತ್ತು.

ಈ ಬಗ್ಗೆ ಮಾತನಾಡಿದ ಸ್ಥಳೀಯ ತಾ.ಪಂ ಸದಸ್ಯ ಶೇಖಬ್ಬ, ನಿನ್ನೆಯಿಂದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿಲ್ಲ.ಅವರಿಗೆ ಅಹಾರದ ವ್ಯವಸ್ಥೆಯನ್ನು ಮಾಡಿಲ್ಲ . ನಮಗೆ ಬೆಳಿಗ್ಗೆ ವಿಷಯ ಸಿಕ್ಕಿದ ಕೂಡಲೇ ನಾವು ಬೆಳಿಗ್ಗಿನ ಉಪಹಾರ ನೀಡಿದ್ದೇವೆ.ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದಿದ್ದಾರೆ.
ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತ ಪಡಿಸಿ, ನಾವು ಆ ಸೋಂಕಿತರಿರುವ ಮನೆಯನ್ನು ಸೀಲ್ ಡೌನ್ ಮಾಡಿದ್ದೇವೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಬಿ.ಬಿ. ರಾವ್ ಗೆ ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸೂಚನೆ ನೀಡಿದ್ದೇವೆ. ನಿನ್ನೆಯೇ ಸಾಗಿಸ ಬೇಕಾಗಿದ್ದು ಈ ಬಗ್ಗೆ ವಿಚಾರಿಸುತ್ತೇನೆ ಎಂದಿದ್ದಾರೆ.

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago