ಕಾಪು : ಮಹಾರಾಷ್ಟ್ರದಿಂದ ಬಂದು 14 ದಿನ ಕ್ವಾರೆಂಟೈನ್ಗೆ ಒಳಪಟ್ಟು ಮನೆಗೆ ಬಂದ ವ್ಯಕ್ತಿಗೆ ಸೋಂಕು ದೃಢವಾದ ವರದಿ ಬಂದ ಹಿನ್ನೆಲೆ ಉಚ್ಚಿಲ ಪೊಲ್ಯ ರಸ್ತೆಯಲ್ಲಿರುವ ಅವರ ವಾಸದ ಅಪಾರ್ಟ್ಮೆಂಟ್ ಸೀಲ್ಢೌನ್ ಮಾಡಲಾಗಿದೆ.ಆದರೆ ಇದುವರೆಗೆ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿಲ್ಲ.ಅಲ್ಲದೆ ಅವರಿಗೆ ನಿನ್ನೆ ರಾತ್ರಿಯಿಂದ ಹೊಟ್ಟೆಗೆ ಅನ್ನ ಅಹಾರ ನೀಡಿಲ್ಲ.ನಮ್ಮನ್ನು ಸ್ಥಳೀಯ ಗ್ರಾ.ಪಂ ಅಧಿಕಾರಿಗಳು ನೋಡಲು ಬಂದಿಲ್ಲ ಎಂದು ಅವರ ಪತ್ನಿ ಆರೋಪಿಸಿದ್ದಾರೆ.ಇಲಾಖೆಯ ಮಾಹಿತಿಯಂತೆ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿರುವುದಾಗಿ ಪತ್ರಿಕೆಯಲ್ಲಿ ವರದಿಯಾಗಿತ್ತು.
ಈ ಬಗ್ಗೆ ಮಾತನಾಡಿದ ಸ್ಥಳೀಯ ತಾ.ಪಂ ಸದಸ್ಯ ಶೇಖಬ್ಬ, ನಿನ್ನೆಯಿಂದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿಲ್ಲ.ಅವರಿಗೆ ಅಹಾರದ ವ್ಯವಸ್ಥೆಯನ್ನು ಮಾಡಿಲ್ಲ . ನಮಗೆ ಬೆಳಿಗ್ಗೆ ವಿಷಯ ಸಿಕ್ಕಿದ ಕೂಡಲೇ ನಾವು ಬೆಳಿಗ್ಗಿನ ಉಪಹಾರ ನೀಡಿದ್ದೇವೆ.ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದಿದ್ದಾರೆ.
ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತ ಪಡಿಸಿ, ನಾವು ಆ ಸೋಂಕಿತರಿರುವ ಮನೆಯನ್ನು ಸೀಲ್ ಡೌನ್ ಮಾಡಿದ್ದೇವೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಬಿ.ಬಿ. ರಾವ್ ಗೆ ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸೂಚನೆ ನೀಡಿದ್ದೇವೆ. ನಿನ್ನೆಯೇ ಸಾಗಿಸ ಬೇಕಾಗಿದ್ದು ಈ ಬಗ್ಗೆ ವಿಚಾರಿಸುತ್ತೇನೆ ಎಂದಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…