Featured

ಉಚ್ಚಿಲ : ಗೂಡಂಗಡಿ ತೆರವಿಗೆ ಮುಂದಾದ ಹೆದ್ದಾರಿ ಕಾಮಗಾರಿ ಗುತ್ತಿಗೆದಾರರು : ಮಾಲಕರಿಂದ ವಿರೋಧ – ಸ್ಥಳದಲ್ಲಿ ಪೊಲೀಸ್ ಬಂದೊಬಸ್ತು- vishwanews24

ಉಚ್ಚಿಲ : ಗೂಡಂಗಡಿ ತೆರವಿಗೆ ಮುಂದಾದ
ಹೆದ್ದಾರಿ ಕಾಮಗಾರಿ ಗುತ್ತಿಗೆದಾರರು : ಮಾಲಕರಿಂದ ವಿರೋಧ

ಕಾಪು, ಫೆ.‌ 11 : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪೇಟೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣದ ವಿಚಾರದಲ್ಲಿ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡಗಳ ತೆರವಿಗೆ ಸ್ಥಳೀಯರು ಮತ್ತು ಹೈವೇ ಗುತ್ತಿಗೆದಾರರ ನಡುವೆ ಘರ್ಷಣೆ ನಡೆದಿದೆ.

ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸರ್ವಿಸ್ ರಸ್ತೆ ರಚನೆಗಾಗಿ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡಗಳ ತೆರವಿಗೆ ಜೆಸಿಬಿ ಸಹಿತವಾಗಿ ಹೆದ್ದಾರಿ ಗುತ್ತಿಗೆದಾರ ಕಂಪನಿಯು ಆಗಮಿಸಿದ್ದು ಅಂಗಡಿಗಳ ಮಾಲಕರು ಕಾಮಗಾರಿಗೆ ತಡೆಯೊಡ್ಡುವ ಪ್ರಯತ್ನ ನಡೆಸಿದರು.

ಕೆಲವು ಅಂಗಡಿಯವರು ತಮ್ಮ ಗೂಡಂಗಡಿಗಳ ತೆರವಿಗೆ ಸಮ್ಮತಿ ಸೂಚಿಸಿದ ಬಳಿಕ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಅಂಗಡಿಗಳನ್ನು ತೆರವು ಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು.

ನವಯುಗ್ ಕಂಪೆನಿಯ ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ರೈ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಉಚ್ಚಿಲದಲ್ಲಿ ಸರ್ವೀಸ್ ರಸ್ತೆ‌ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಎರಡೂ ಬದಿಯಲ್ಲಿ 30 ಮೀಟರ್ ಅಗಲದವರೆಗೆ ಹೆದ್ದಾರಿ ಇಲಾಖೆಯು ಸ್ವಾಧೀನ ಪಡಿಸಿ ಕೊಂಡಿರುವ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎಂದರು.

ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಎಸ್ಸೈ ದಿಲೀಪ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago