ಕಾಪು, ಫೆ. 11 : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪೇಟೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣದ ವಿಚಾರದಲ್ಲಿ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡಗಳ ತೆರವಿಗೆ ಸ್ಥಳೀಯರು ಮತ್ತು ಹೈವೇ ಗುತ್ತಿಗೆದಾರರ ನಡುವೆ ಘರ್ಷಣೆ ನಡೆದಿದೆ.
ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸರ್ವಿಸ್ ರಸ್ತೆ ರಚನೆಗಾಗಿ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡಗಳ ತೆರವಿಗೆ ಜೆಸಿಬಿ ಸಹಿತವಾಗಿ ಹೆದ್ದಾರಿ ಗುತ್ತಿಗೆದಾರ ಕಂಪನಿಯು ಆಗಮಿಸಿದ್ದು ಅಂಗಡಿಗಳ ಮಾಲಕರು ಕಾಮಗಾರಿಗೆ ತಡೆಯೊಡ್ಡುವ ಪ್ರಯತ್ನ ನಡೆಸಿದರು.
ಕೆಲವು ಅಂಗಡಿಯವರು ತಮ್ಮ ಗೂಡಂಗಡಿಗಳ ತೆರವಿಗೆ ಸಮ್ಮತಿ ಸೂಚಿಸಿದ ಬಳಿಕ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಅಂಗಡಿಗಳನ್ನು ತೆರವು ಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು.
ನವಯುಗ್ ಕಂಪೆನಿಯ ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ರೈ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಉಚ್ಚಿಲದಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಎರಡೂ ಬದಿಯಲ್ಲಿ 30 ಮೀಟರ್ ಅಗಲದವರೆಗೆ ಹೆದ್ದಾರಿ ಇಲಾಖೆಯು ಸ್ವಾಧೀನ ಪಡಿಸಿ ಕೊಂಡಿರುವ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎಂದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಎಸ್ಸೈ ದಿಲೀಪ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…