Featured

ಉಚ್ಚಿಲ: ಚರಂಡಿಗೆ ಬಿದ್ದು ಒದ್ದಾಡಿದ ಕಾಡುಕೋಣ ರಕ್ಷಣೆ  – vishwanews24

ಉಚ್ಚಿಲ: ಚರಂಡಿಗೆ ಬಿದ್ದು ಒದ್ದಾಡಿದ ಕಾಡುಕೋಣ ರಕ್ಷಣೆ

ಕಾಪು: ಕಾಡು ಬಿಟ್ಟು ನಾಡಿಗೆ ಬಂದು ಚರಂಡಿಗೆ ಬಿದ್ದು ಹೊರಬರಲಾಗದೇ ಒದ್ದಾಡಿದ ಕಾಡುಕೋಣವನ್ನು ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.

ಸುಮಾರು ಆರು ವರ್ಷ ಪ್ರಾಯದ ಕಾಡುಕೋಣ ಸೋಮವಾರ ರಾತ್ರಿ ಮಹಾಲಕ್ಷ್ಮೀ ದೇವಸ್ಥಾನದ ಬಳಿಯ ಚರಂಡಿ ಹೊಂಡಕ್ಕೆ ಬಿದ್ದಿದ್ದು ಹೊರ ಬರಲಾಗದೇ ಒದ್ದಾಡಿದೆ. ಅದನ್ನು ಗಮನಿಸಿದ ದೇವಸ್ಥಾನದ ಸಿಬಂದಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅವರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಾತ್ರಿ ಕಾಡುಕೋಣವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ಆರಂಭಿಸಿದರು. ಸಹಾಯಕ ಅರಣ್ಯ ಸಂಕ್ಷರಣಾಧಿಕಾರಿ ಕ್ಲಿಫರ್ಡ್‌ ಲೋಬೋ, ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಜೀವನ್‌ದಾಸ್‌ ಶೆಟ್ಟಿ, ಗುರುರಾಜ್‌ ಕೆ., ಗಸ್ತು ಅರಣ್ಯಾಧಿಕಾರಿಗಳಾದ ಅಭಿಲಾಷ್‌, ಮಂಜುನಾಥ್‌ ನಾಯಕ್‌, ಚರಣ್‌ ಜೋಗಿ, ಚಾಲಕ ಜಾಯ್‌ ಮುತುವರ್ಜಿಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸಿಬಂದಿ ಸಹಕರಿಸಿದ್ದರು.

ಕಾಡುಕೋಣ ಸಂಪೂರ್ಣ ಹೆದರಿದ್ದು ಹಗಲಿನಲ್ಲಿ ಕಾರ್ಯಾಚರಣೆ ನಡೆಸಿದರೆ ಜನರಿಗೆ ತೊಂದರೆಯಾಗುವ ಭೀತಿಯಿಂದ ರಾತ್ರಿ ವೇಳೆಯಲ್ಲಿ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಗಿದೆ. ಜೆಸಿಬಿ ಮೂಲಕ ಹೊಂಡದ ಸುತ್ತಲಿನ ಮಣ್ಣನ್ನು ಬದಿಗೆ ಸರಿಸಿ ಕಾಡುಕೋಣಕ್ಕೆ ಮೇಲಕ್ಕೆ ಬರಲು ಅವಕಾಶ ಮಾಡಿಕೊಡಲಾಗಿದೆ ಎಂದು ಉಪವಲಯ ಅರಣ್ಯಾಧಿಕಾರಿ ಜೀವನ್‌ದಾಸ್‌ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago