Featured

ಉಚ್ಚಿಲ ದಸರಾ ಮಹೋತ್ಸವ : ಸೆ. 27 ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : : ಯಶ್ಪಾಲ್ ಸುವರ್ಣ – vishwanews24

ಉಚ್ಚಿಲ ದಸರಾ ಮಹೋತ್ಸವ : ಸೆ. 27 ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : : ಯಶ್ಪಾಲ್ ಸುವರ್ಣ

ಉಡುಪಿ: ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ ನಲಿಕೆ 2025 ಕಾರ್ಯಕ್ರಮ ಅಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ಶನಿವಾರ ಬೆಳಿಗ್ಗೆ 9.30ಕ್ಕೆ ಉಚ್ಚಿಲ ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದೆ.

ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ ನಾಡ ಹಬ್ಬ ದಸರಾವನ್ನು ಆಯ್ಕೆ ಮಾಡಿದ್ದು, ಸ್ಪರ್ಧಿಗಳು ಈ ವಿಷಯಕ್ಕೆ ಸಂಬಂಧಿಸಿದ ಚಿತ್ರವನ್ನು ಬಿಡಿಸಬೇಕು. ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಕಿರಿಯರ ವಿಭಾಗ (1 ರಿಂದ 4ನೇ ತರಗತಿ), ಪ್ರಾಥಮಿಕ ವಿಭಾಗ ( 5 ರಿಂದ 7 ನೇ ತರಗತಿ), ಹೈಸ್ಕೂಲ್ ವಿಭಾಗ (8 ರಿಂದ 10ನೇ ತರಗತಿ), ಕಾಲೇಜು ವಿಭಾಗ (ಪದವಿ ಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಶೀಟ್ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಅವರೇ ತರತಕ್ಕದ್ದು.

ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಿದ್ದು, ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು.

ಮಧ್ಯಾಹ್ನ 2 ಗಂಟೆಗೆ ಶ್ರೀಮತಿ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ಆಯೋಜಿಸಿದ್ದು, ಗುಂಪು ವಿಭಾಗದಲ್ಲಿ ಪ್ರಥಮ ಬಹುಮಾನ 30,000, ದ್ವಿತೀಯ ಬಹುಮಾನ 20,000, ತೃತೀಯ ಬಹುಮಾನ 15,000 ಹಾಗೂ ವೈಯುಕ್ತಿಕ ವಿಭಾಗದಲ್ಲಿ ಪ್ರಥಮ 6,000, ದ್ವಿತೀಯ 4,000, ತೃತೀಯ 3,000 ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಲು ಆನ್ಲೈನ್ ನೋಂದಣಿಗಾಗಿ ಹಾಗೂ ಸ್ಫರ್ಧೆಯ ವಿವರಗಳು ಮಹಾಲಕ್ಷ್ಮೀ ಬ್ಯಾಂಕಿನ ವೆಬ್ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು ಆನ್ಲೈನ್ ಮೂಲಕ ನೋದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9972120332 ಸಂಪರ್ಕಿಸಬಹುದು. ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

6 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

7 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago