Featured

ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ  – vishwanews24

ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ

ಕಾಪು: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿರುವ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಸರಸ್ವತಿ ಮಂದಿರ ಪ್ರೌಢ ಶಾಲೆಯ ಮೈದಾನದಲ್ಲಿ ಅ.6 ರಂದು ಪ್ರಥಮ ಬಾರಿಗೆ ಉಡುಪಿ ಮತ್ತು ದ.ಕ. ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆ ನಡೆಯಿತು.

ಕುಸ್ತಿ ಪಂದ್ಯಾಟವನ್ನು ಉದ್ಘಾಟಿಸಿದ ನಾಡೋಜ ಡಾ. ಜಿ. ಶಂಕರ್ ಮಾತನಾಡಿ, ಕುಸ್ತಿ ಅತ್ಯಂತ ಪುರಾತನ ಕ್ರೀಡೆಯಾಗಿದೆ. ರಾಜ, ಮಹಾರಾಜರುಗಳ ಕಾಲದಲ್ಲಿ ನಡೆಯುತ್ತಿದ್ದ ಕುಸ್ತಿಯನ್ನು ಭವಿಷ್ಯಕ್ಕೂ ಉಳಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಪ್ರಥಮ ಬಾರಿಗೆ‌ ಸ್ಪರ್ಧೆ ನಡೆಯುತ್ತಿದೆ. ಸರಕಾರದ ನೆರವಿನೊಂದಿಗೆ ಮುಂದಿನ ವರ್ಷಗಳಲ್ಲಿ ಮತ್ತಷ್ಟು ವಿಜ್ರಂಭಣೆಯಿಂದ ಅಯೋಜಿಸಲಾಗುವುದು ಎಂದರು.

ದ.ಕ. ನೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕುಸ್ತಿ ಫೆಡರೇಷನ್ ಅಧ್ಯಕ್ಷ ದಿಲ್ ರಾಜ್ ಆಳ್ವ, ಪ್ರಮುಖರಾದ ಸುರೇಶ್ಚಂದ್ರ ಶೆಟ್ಟಿ, ಗೋವರ್ಧನ ಬಂಗೇರ, ಮೋಹನ್ ಬೇಂಗ್ರೆ, ವಾಸುದೇವ ಸಾಲ್ಯಾನ್, ಚೇತನ್ ಬೇಂಗ್ರೆ, ಶರಣ್ ಮಟ್ಟು, ದಿನೇಶ್ ಎರ್ಮಾಳು, ಉಷಾ ರಾಣಿ, ಸುಗುಣಾ ಕರ್ಕೇರ, ಪುಂಡಲೀಕ ಕರ್ಕೇರ ಹೊಸಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಬಾಲಕರು ಮತ್ತು ಪುರುಷರ ವಿಭಾಗದಲ್ಲಿ 30-35 ಕೆಜಿ, 42 ಕೆಜಿ, 46 ಕೆಜಿ, 50 ಕೆಜಿ, 57 ಕೆಜಿ, 61 ಕೆಜಿ, 65, ಕೆಜಿ 86 + ಕೆಜಿ ವಿಭಾಗದ ಸ್ವರ್ಧೆ ನಡೆಯಿತು. ಬಾಲಕಿಯರು ಮತ್ತು ಮಹಿಳೆಯರ ವಿಭಾಗದಲ್ಲಿ 40 ಕೆಜಿ, 43 ಕೆಜಿ, 46 ಕೆಜಿ, 49 ಕೆಜಿ, 53 ಕೆಜಿ, 57 ಕೆಜಿ, 62, ಕೆಜಿ ಮತ್ತು 65-69 ಕೆಜಿ ವಿಭಾಗದ ಸ್ಪರ್ಧೆ ನಡೆಯಿತು.

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆದ ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪುರುಷರ ವಿಭಾಗದಲ್ಲಿ ಉಡುಪಿ ಉಚ್ಚಿಲ ದಸರಾ ಕೇಸರಿ 2024, ಉಡುಪಿ ಉಚ್ಚಿಲ ದಸರಾ ಕುಮಾರ್ 2024, ಮಹಿಳೆಯರ ವಿಭಾಗದಲ್ಲಿ ಉಚ್ಚಿಲ ದಸರಾ ಕುವರಿ 2024 ಬಿರುದಿನೊಂದಿಗೆ ಬೆಳ್ಳಿ ಗದೆ ಪ್ರಶಸ್ತಿ ಹಾಗೂ ವಿವಿಧ ತೂಕದ ವಿಭಾಗದ ಸ್ಪರ್ಧೆಯ ವಿಜೇತರಿಗೆ ನಗದು ಸಹಿತ ಬಹುಮಾನ ವಿತರಿಸಲಾಯಿತು. 10 ಕೆಟಗರಿಯಲ್ಲಿ ನಡೆದ ಸ್ಪರ್ಧೆಯಲ್ಲಿ 242 ಮಂದಿ ಸ್ಪರ್ಧಾಳುಗಳು ಭಾಗವಹಿಸಿದ್ದರು‌.

ವೀರ ಮಾರುತಿ ವ್ಯಾಯಾಮ‌ ಶಾಲೆ ಮಂಗಳೂರು ಬೇಂಗ್ರೆ, ಬ್ರದರ್ಸ್ ಯುವಕ ಮಂಡಲ ಉಳ್ಳಾಲ, ಮೋಹನ್ ಬೇಂಗ್ರೆ ಮತ್ತು ಕುಟುಂಬದವರು ಕ್ರಮವಾಗಿ ದಸರಾ ಕೇಸರಿ, ದಸರಾ ಕುಮಾರ್ ಮತ್ತು ದಸರಾ ಕುವರಿ ಪರ್ಯಾಯ ಬೆಳ್ಳಿ ಗದೆಯನ್ನು ಪ್ರಾಯೋಜಿಸಿದ್ದಾರೆ.

ಶಂಕರಪ್ಪ, ಸತೀಶ್ ಬೇಂಗ್ರೆ, ಸಂದೀಪ್ ರಾವ್, ವಿನೋದ್ ಕುಮಾರ್, ಮೋಹನ್ ಬೇಂಗ್ರೆ, ರಾಜು ಪಲ್ಕೆ , ಪ್ರಮೋದ್, ಸ್ವಪ್ನ ತೀರ್ಪುಗಾರರಾಗಿ ಸಹಕರಿಸಿದ್ದರು.
ಕುಸ್ತಿ ಪಂದ್ಯಾಟದ ಸಂಘಟಕರಾದ ವಿಜಯ್ ಸುವರ್ಣ ಕುಳಾಯಿ ಸ್ವಾಗತಿಸಿ, ಪುಂಡಲೀಕ ಹೊಸಬೆಟ್ಟು ವಂದಿಸಿದರು. ವ್ಯವಸ್ಥಾಪಕ ಸತೀಶ್ ಅಮೀನ್‌ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

21 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago