Featured

ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ  – vishwanews24

ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ

ಕಾಪು: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿರುವ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಸರಸ್ವತಿ ಮಂದಿರ ಪ್ರೌಢ ಶಾಲೆಯ ಮೈದಾನದಲ್ಲಿ ಅ.6 ರಂದು ಪ್ರಥಮ ಬಾರಿಗೆ ಉಡುಪಿ ಮತ್ತು ದ.ಕ. ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆ ನಡೆಯಿತು.

ಕುಸ್ತಿ ಪಂದ್ಯಾಟವನ್ನು ಉದ್ಘಾಟಿಸಿದ ನಾಡೋಜ ಡಾ. ಜಿ. ಶಂಕರ್ ಮಾತನಾಡಿ, ಕುಸ್ತಿ ಅತ್ಯಂತ ಪುರಾತನ ಕ್ರೀಡೆಯಾಗಿದೆ. ರಾಜ, ಮಹಾರಾಜರುಗಳ ಕಾಲದಲ್ಲಿ ನಡೆಯುತ್ತಿದ್ದ ಕುಸ್ತಿಯನ್ನು ಭವಿಷ್ಯಕ್ಕೂ ಉಳಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಪ್ರಥಮ ಬಾರಿಗೆ‌ ಸ್ಪರ್ಧೆ ನಡೆಯುತ್ತಿದೆ. ಸರಕಾರದ ನೆರವಿನೊಂದಿಗೆ ಮುಂದಿನ ವರ್ಷಗಳಲ್ಲಿ ಮತ್ತಷ್ಟು ವಿಜ್ರಂಭಣೆಯಿಂದ ಅಯೋಜಿಸಲಾಗುವುದು ಎಂದರು.

ದ.ಕ. ನೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕುಸ್ತಿ ಫೆಡರೇಷನ್ ಅಧ್ಯಕ್ಷ ದಿಲ್ ರಾಜ್ ಆಳ್ವ, ಪ್ರಮುಖರಾದ ಸುರೇಶ್ಚಂದ್ರ ಶೆಟ್ಟಿ, ಗೋವರ್ಧನ ಬಂಗೇರ, ಮೋಹನ್ ಬೇಂಗ್ರೆ, ವಾಸುದೇವ ಸಾಲ್ಯಾನ್, ಚೇತನ್ ಬೇಂಗ್ರೆ, ಶರಣ್ ಮಟ್ಟು, ದಿನೇಶ್ ಎರ್ಮಾಳು, ಉಷಾ ರಾಣಿ, ಸುಗುಣಾ ಕರ್ಕೇರ, ಪುಂಡಲೀಕ ಕರ್ಕೇರ ಹೊಸಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಬಾಲಕರು ಮತ್ತು ಪುರುಷರ ವಿಭಾಗದಲ್ಲಿ 30-35 ಕೆಜಿ, 42 ಕೆಜಿ, 46 ಕೆಜಿ, 50 ಕೆಜಿ, 57 ಕೆಜಿ, 61 ಕೆಜಿ, 65, ಕೆಜಿ 86 + ಕೆಜಿ ವಿಭಾಗದ ಸ್ವರ್ಧೆ ನಡೆಯಿತು. ಬಾಲಕಿಯರು ಮತ್ತು ಮಹಿಳೆಯರ ವಿಭಾಗದಲ್ಲಿ 40 ಕೆಜಿ, 43 ಕೆಜಿ, 46 ಕೆಜಿ, 49 ಕೆಜಿ, 53 ಕೆಜಿ, 57 ಕೆಜಿ, 62, ಕೆಜಿ ಮತ್ತು 65-69 ಕೆಜಿ ವಿಭಾಗದ ಸ್ಪರ್ಧೆ ನಡೆಯಿತು.

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆದ ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪುರುಷರ ವಿಭಾಗದಲ್ಲಿ ಉಡುಪಿ ಉಚ್ಚಿಲ ದಸರಾ ಕೇಸರಿ 2024, ಉಡುಪಿ ಉಚ್ಚಿಲ ದಸರಾ ಕುಮಾರ್ 2024, ಮಹಿಳೆಯರ ವಿಭಾಗದಲ್ಲಿ ಉಚ್ಚಿಲ ದಸರಾ ಕುವರಿ 2024 ಬಿರುದಿನೊಂದಿಗೆ ಬೆಳ್ಳಿ ಗದೆ ಪ್ರಶಸ್ತಿ ಹಾಗೂ ವಿವಿಧ ತೂಕದ ವಿಭಾಗದ ಸ್ಪರ್ಧೆಯ ವಿಜೇತರಿಗೆ ನಗದು ಸಹಿತ ಬಹುಮಾನ ವಿತರಿಸಲಾಯಿತು. 10 ಕೆಟಗರಿಯಲ್ಲಿ ನಡೆದ ಸ್ಪರ್ಧೆಯಲ್ಲಿ 242 ಮಂದಿ ಸ್ಪರ್ಧಾಳುಗಳು ಭಾಗವಹಿಸಿದ್ದರು‌.

ವೀರ ಮಾರುತಿ ವ್ಯಾಯಾಮ‌ ಶಾಲೆ ಮಂಗಳೂರು ಬೇಂಗ್ರೆ, ಬ್ರದರ್ಸ್ ಯುವಕ ಮಂಡಲ ಉಳ್ಳಾಲ, ಮೋಹನ್ ಬೇಂಗ್ರೆ ಮತ್ತು ಕುಟುಂಬದವರು ಕ್ರಮವಾಗಿ ದಸರಾ ಕೇಸರಿ, ದಸರಾ ಕುಮಾರ್ ಮತ್ತು ದಸರಾ ಕುವರಿ ಪರ್ಯಾಯ ಬೆಳ್ಳಿ ಗದೆಯನ್ನು ಪ್ರಾಯೋಜಿಸಿದ್ದಾರೆ.

ಶಂಕರಪ್ಪ, ಸತೀಶ್ ಬೇಂಗ್ರೆ, ಸಂದೀಪ್ ರಾವ್, ವಿನೋದ್ ಕುಮಾರ್, ಮೋಹನ್ ಬೇಂಗ್ರೆ, ರಾಜು ಪಲ್ಕೆ , ಪ್ರಮೋದ್, ಸ್ವಪ್ನ ತೀರ್ಪುಗಾರರಾಗಿ ಸಹಕರಿಸಿದ್ದರು.
ಕುಸ್ತಿ ಪಂದ್ಯಾಟದ ಸಂಘಟಕರಾದ ವಿಜಯ್ ಸುವರ್ಣ ಕುಳಾಯಿ ಸ್ವಾಗತಿಸಿ, ಪುಂಡಲೀಕ ಹೊಸಬೆಟ್ಟು ವಂದಿಸಿದರು. ವ್ಯವಸ್ಥಾಪಕ ಸತೀಶ್ ಅಮೀನ್‌ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago