Featured

ಉಚ್ಚಿಲ ದಸರಾ 2024 – ಪ್ರತೀ ದಿನ ಸಾಂಸ್ಕೃತಿಕ ಕಲರವ ; ವಿಶೇಷ ಲೇಸರ್‌ ಶೋ ಪ್ರದರ್ಶನ – vishwanews24

ಅ.3 -12 :ಉಚ್ಚಿಲ ದಸರಾ 2024 –  ಪ್ರತೀ ದಿನ ಸಾಂಸ್ಕೃತಿಕ ಕಲರವ ; ವಿಶೇಷ ಲೇಸರ್‌ ಶೋ ಪ್ರದರ್ಶನ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 3ರಿಂದ 12ರವರೆಗೆ ಜರಗಲಿರುವ ಉಚ್ಚಿಲ ದಸರಾ 2024ರ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ಮತ್ತು ಭಕ್ತರ ಸಹಕಾರದೊಂದಿಗೆ ಶಾಲಿನಿ ಡಾ| ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾ -ನೃತ್ಯ ಸ್ಪರ್ಧೆ : ಅ.3ರ ಸಂಜೆ 6.30ರಿಂದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರಕಲಿದೆ.

ಅ. 4ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಲೈವ್‌ ಹಿನ್ನೆಲೆ ಸಂಗೀತ ವಾದನದೊಂದಿಗೆ ನಾಟ್ಯ ನಿಲಯಂ ಮಂಜೇಶ್ವರ ತಂಡದವರಿಂದ ನೃತ್ಯ ವೈವಿಧ್ಯ,

ಅ. 5ರ ಸಂಜೆ ಗಂಟೆ 6.15ರಿಂದ
ಕ್ಷೇತ್ರದ ರಥಬೀದಿಯ ಸುತ್ತ ಸಾಮೂಹಿಕ ಭಜನ ಕುಣಿತ, ರಾತ್ರಿ 7.30ರಿಂದ ಜಿಲ್ಲಾ ಮೊಗವೀರ ಯುವ ಸಂಘಟನೆ ಸದಸ್ಯರಿಂದ
ಸಾಂಸ್ಕೃತಿಕ ಕಾಯಕ್ರಮ, ರಾತ್ರಿ 8.30ರಿಂದ ಗುರು ಕೌಸಲ್ಯ ನಿವಾಸ್‌ ಮತ್ತು ಬಳಗ, ಎಂ. ಎಸ್‌. ನಾಟ್ಯಕ್ಷೇತ್ರ ಬೆಂಗಳೂರು ಇವರಿಂದ ಶ್ರೀರಾಮ ಹನುಮಂತ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.

ಸಾಮೂಹಿಕ ದಾಂಡಿಯಾ: ಅ. 6ರ ಸಂಜೆ 6.30ರಿಂದ 8ರ ತನಕ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಸಾಮೂಹಿಕ ದಾಂಡಿಯಾ ನೃತ್ಯ, ರಾತ್ರಿ 8ರಿಂದ ಮೆಗಾ ಮ್ಯಾಜಿಕ್‌ ಸ್ಟಾರ್‌ ಕುದ್ರೋಳಿ ಗಣೇಶ್‌ ಅವರಿಂದ ವಿಸ್ಮಯ ಜಾದೂ, ಅ. 7ರ ಸಂಜೆ 4ರಿಂದ ವಿದುಷಿ ಪವನ ಬಿ. ಆಚಾರ್‌ ಮಣಿಪಾಲ ಅವರಿಂದ ಶತವೀಣಾವಲ್ಲರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಜ್ಞಾನ ಐತಾಳ್‌ ನೇತೃತ್ವದ ಹೆಜ್ಜೆನಾದ ಮಂಗಳೂರು ಇವರಿಂದ ನೃತ್ಯ

ಯಕ್ಷಗಾನ, ನೃತ್ಯ, ಹರಿಕಥೆ:
ಅ. 8ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ
ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಯಕ್ಷ ಕಲಾ ತಂಡ ಇವರಿಂದ ಚಕ್ರ ಚಂಡಿಕೆ ಯಕ್ಷಗಾನ,

ಅ. 9ರ ಮಧ್ಯಾಹ್ನ 2ರಿಂದ ಯಶಸ್ವಿನಿ ಉಳ್ಳಾಲ್‌ ಅವರಿಂದ ಗಾನ ಲಹರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದೇವಿ ನೃತ್ಯಾರಾಧನ ಕಲಾಕೇಂದ್ರ ಪುತ್ತೂರು ಇದರ ನೃತ್ಯ ಗುರು ವಿದುಷಿ ರೋಹಿಣಿ ಉದಯ್‌ ಶಿಷ್ಯೆಯರಿಂದ ನೃತ್ಯ ರಂಜನಿ,

ಅ. 10ರ ಸಂಜೆ 6.30ರಿಂದ ಖ್ಯಾತ ಕೀರ್ತನಕಾರ ಡಾ| ಎಸ್‌.ಪಿ. ಗುರುದಾಸ್‌ ಮಂಗಳೂರು ಅವರಿಂದ ಹರಿಕಥಾ ಸತ್ಸಂಗ ಲಕ್ಷ್ಮೀ ಕಲ್ಯಾಣ ನಡೆಯಲಿದೆ.

ಅಜಯ್‌ ವಾರಿಯರ್‌ ನೇತೃತ್ವದಲ್ಲಿ ಸಂಗೀತ ಸಂಜೆ ಅ. 11ರ ಸಂಜೆ 6.30ರಿಂದ ಕಲಾಮೃತ ತಂಡ ಮಂಗಳೂರು ಅವರಿಂದ
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಹಿನ್ನೆಲೆ ಗಾಯಕ ಅಜಯ್‌ ವಾರಿಯರ್‌ ಮತ್ತು ತಂಡ ಬೆಂಗಳೂರು
ಇವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ,

ಅ. 12ರ ಬೆಳಗ್ಗೆ 11.30ರಿಂದ ವಿದುಷಿ ಡಾ| ಸುಚಿತ್ರ ಹೊಳ್ಳ ಪುತ್ತೂರು ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಅ. 12ರಂದು ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ಶೋಭಾಯಾತ್ರೆ ಮತ್ತು ಜಲಸ್ತಂಭನೆ

ಪ್ರಯುಕ್ತ ರಾತ್ರಿ 10 ಗಂಟೆಗೆ ಕಾಪು ಬೀಚ್‌ ನಲ್ಲಿ ಲೈವ್‌ ಮ್ಯೂಸಿಕ್‌ ಶೋ ಮತ್ತು ವಿಶೇಷ ಲೇಸರ್‌ ಶೋ ಪ್ರದರ್ಶನ ನಡೆಯಲಿದೆ

ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ್‌ ಸುವರ್ಣ, ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ್‌ ಕರ್ಕೇರ ಹಾಗೂ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

5 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

15 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

24 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago