Featured

ಉಚ್ಚಿಲ ದಸರಾ 2024: ಪ್ರೇಕ್ಷಕರ ಮನಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ , ಮನರಂಜಿಸಿದ ಹೆಣ್ಣುಮಕ್ಕಳ ಹುಲಿ ಕುಣಿತ ಮತ್ತು ಕುಸ್ತಿ ಸ್ಪರ್ಧೆ – vishwanews24

ಉಚ್ಚಿಲ ದಸರಾ 2024: ಪ್ರೇಕ್ಷಕರ ಮನಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ ,  ಮನರಂಜಿಸಿದ ಹೆಣ್ಮಕ್ಕಳ ಹುಲಿ ಕುಣಿತ ಮತ್ತು ಕುಸ್ತಿ ಸ್ಪರ್ಧೆ

ಕಾಪು: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ 2024ರ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಳ್ಳುತ್ತಿವೆ.

ಸ್ಥಳೀಯರಿಂದ ಹಿಡಿದು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಪ್ರಸಿದ್ಧ ಕಲಾವಿದರ ಯಕ್ಷಗಾನ, ನೃತ್ಯ ರೂಪಕ, ನೃತ್ಯ ವೈವಿಧ್ಯ, ಹರಿಕಥೆ ಸಹಿತ ಕಲೆ ಮತ್ತು ಸಂಸ್ಕೃತಿಯ ಕಾರ್ಯಕ್ರಮಗಳಿಗೆ ಉತ್ತಮ ಸ್ಪಂದನೆ ದೊರೆತಿದೆ.

ತುಳುನಾಡಿನ ಧಾರ್ಮಿಕ ಸಂಸ್ಕೃತಿಯನ್ನು ಉಳಿಸುವಲ್ಲಿ ನಡೆಸಿ ರುವ ಸಾಮೂಹಿಕ ಕುಣಿತ ಭಜನೆ, ನಿತ್ಯ ಭಜನಾ ಕಾರ್ಯಕ್ರಮ, ಶರನ್ನ ವರಾತ್ರಿಯ ಪರಂಪರೆಯನ್ನು ಮೆರೆ ಯುವ ದಾಂಡಿಯಾ ಮತ್ತು ಗರ್ಬಾ ನೃತ್ಯಗಳಲ್ಲೂ ಜನರು ಪಾಲ್ಗೊಂಡಿದ್ದಾರೆ.

ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಸಮಾಜದ ವಿವಿಧ ಸಂಘ-ಸಂಸ್ಥೆಗಳು, ಯುವ ಸಂಘಟನೆ, ಮಹಾಸಭಾ ಮತ್ತು ಮಹಿಳಾ ಸಭಾದ ಸದಸ್ಯರೂ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿರುವುದು ವಿಶೇಷ.

ಅಜಯ್‌ ವಾರಿಯರ್‌ ಸಂಗೀತ
ಅ. 11ರಂದು ಮಹಾನವಮಿಯಂದು ಸಂಜೆ 6.30ಕ್ಕೆ ಕಲಾಮೃತ ಮಂಗಳೂರು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8 ಕ್ಕೆ ಹಿನ್ನೆಲೆ ಗಾಯಕ ಅಜಯ್‌ ವಾರಿಯರ್‌ ಬೆಂಗಳೂರು ಮತ್ತು ತಂಡದಿಂದ ಸಂಗೀತ ರಸ ಸಂಜೆ ಇರಲಿದೆ.

ಮನರಂಜಿಸಿದ ಹೆಣ್ಮಕ್ಕಳ ಹುಲಿ ಕುಣಿತ ಮತ್ತು ಕುಸ್ತಿ ಸ್ಪರ್ಧೆ
ಪ್ರಥಮ ಬಾರಿಗೆ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯು ಕರಾವಳಿಯ ಇತಿಹಾಸದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಸಾಮೂಹಿಕ ದಾಂಡಿಯಾ ನೃತ್ಯ, ವಿಸ್ಮಯ ಜಾದೂ, ಶತವೀಣಾವಲ್ಲರಿ ಹೆಚ್ಚಿನ ಜನಾಕರ್ಷಣೆಗೆ ಕಾರಣವಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago