ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ 3 ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024ರ ಅಂಗವಾಗಿ ಕ್ಷೇತ್ರದ ಪ್ರಾಂಗಣದ ಸುತ್ತ ನಡೆದ ಸಾಮೂಹಿಕ ಕುಣಿತ ಭಜನೆ ಭಕ್ತಿ ಭಾವದ ಪರಾಕಾಷ್ಠೆಗೆ ಸಾಕ್ಷಿಯಾಯಿತು
ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ರಥಬೀದಿಯ ಸುತ್ತಲೂ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನೆ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 50ಕ್ಕೂ ಅಧಿಕ ತಂಡಗಳಿಂದ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು. ದಸರಾ ರೂವಾರಿ ನಾಡೋಜ ಡಾ| ಜಿ. ಶಂಕರ್ ಅವರು ಭಜನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕ್ಷೇತ್ರದ ಪ್ರಧಾನ ಅರ್ಚಕ ವೇ| ಕೆ.ವಿ. ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಪ್ರಮುಖರಾದ ವಾಸುದೇವ ಸಾಲ್ಯಾನ್, ಗುಂಡು ಅಮೀನ್ ಮೊದಲಾದವರಿದ್ದರು.
ಸುನೀಲ್ ಸಾಲ್ಯಾನ್ ಮುಕ್ಕ ಅವರ ನಿರ್ಹಹಣೆಯಲ್ಲಿ ಜರಗಿದ ಕುಣಿತ ಭಜನಾ ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆದಿದೆ. ಭಜನಾ ತಂಡಗಳನ್ನು ಪ್ರೋತ್ಸಾಹಿಸಿ ಗೌರವಿಸಲಾಯಿತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…