Featured

ಉಚ್ಚಿಲ : ಪಣಿಯೂರು-ಹೆದ್ದಾರಿ 66ರ ಅಪಘಾತ ವಲಯಕ್ಕೆ ತಾರ್ಕಿಕ ಅಂತ್ಯ  – ಸಾರ್ವಜನಿಕರು ನಿಟ್ಟಿಸಿರು – Vishwanews24

ಉಚ್ಚಿಲ : ಪಣಿಯೂರು-ಹೆದ್ದಾರಿ 66ರ ಅಪಘಾತ ವಲಯಕ್ಕೆ ತಾರ್ಕಿಕ ಅಂತ್ಯ – ಸಾರ್ವಜನಿಕರು ನಿಟ್ಟಿಸಿರು

ಕಾಪು: ಉಚ್ಚಿಲದ ಅಪಘಾತ ವಲಯ ಎಂದೇ ಕುಖ್ಯಾತಿ ಪಡೆದಿದ್ದ ಪಣಿಯೂರು- ಹೆದ್ದಾರಿ 66ರ ತಿರುವಿಗೆ ರವಿವಾರ ಸಂಜೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಸಾರ್ವಜನಿಕರು ನಿಟ್ಟಿಸಿರು ಬಿಡುವಂತಾಗಿದೆ.

ಇಲ್ಲಿಯ ಅವೈಜ್ಞಾನಿಕ ತಿರುವಿನಲ್ಲಿ ಮೂರು ವರ್ಷದ ಅವಧಿಯಲ್ಲಿ ಸರಿಸುಮಾರು 300ಕ್ಕೂ ಹೆಚ್ಚುಅಪಘಾತಗಳು ಸಂಭವಿಸಿದೆ. ಇಲ್ಲಿ ಹಲವಾರು ಪ್ರಾಣತೆತ್ತಿದ್ದು, ಹೆಚ್ಚಿನವರು ಕೈ ಕಾಲು ಮುರಿತಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಹೆದ್ದಾರಿ ಇಲಾಖೆಗೆ ಮಾಹಿತಿ ನೀಡಿ, ಈ ಅವಜ್ಞಾನಿಕ ತಿರುವನ್ನು ಬಂದ್ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು.

ಹೆದ್ದಾರಿ ಇಲಾಖೆ ಕಿವಿ ಕೇಳದಂತಾಗಿತ್ತು. ಅಂತೂ ಭಾನುವಾರ ಸಂಜೆ ಹೆದ್ದಾರಿ ಇಲಾಖಾ ಗುತ್ತಿಗೆದಾರ ನವಯುಗ ಕಂಪನಿಯವರು ಉಚ್ಚಿಲದ ಅವೈಜ್ಞಾನಿಕ ತಿರುವನ್ನು ಕಾಂಕ್ರೀಟ್ ಸ್ಲಾಬ್ ಅಳವಡಿಸುವ ಮೂಲಕ ತಾರ್ಕಿಕ ಅಂತ್ಯ ಹಾಡಿದ್ದಾರೆ. ಉಚ್ಚಿಲದಲ್ಲಿ ಸರ್ವಿಸ್ ರಸ್ತೆ ಸಂಪೂರ್ಣಗೊಂಡಿದ್ದರೂ, ಸರ್ವೀಸ್‌ ರಸ್ತೆಯಲ್ಲಿ ಹೆದ್ದಾರಿಯ ಪೂರ್ವ ಅಥವಾ ಪಶ್ಚಿ ಭಾಗಕ್ಕೆ ಸಾಗಲು ಉತ್ತರದಲ್ಲಿ ಕೊಪ್ಪಲಂಗಡಿ ಮತ್ತು ದಕ್ಷಿಣದಲ್ಲಿ ಎರ್ಮಾಳಿಗೆ ಸಾಗುವ ಪರಿಸ್ಥಿತಿ ಇದೆ. ಇದರಿಂದಾಗಿ ವಾಹನ ಸವಾರರು ವಿರುದ್ಧ ದಿಕ್ಕಿನಿಂದ ಸಾಗುವುದರಿಂದ ಮತ್ತೊಂದು ಅಪಘಾತ ವಲಯವಾಗಿ ಮಾರ್ಪಟ್ಟಿದೆ.

ಆದಷ್ಟು ಶೀಘ್ರವಾಗಿ ಉತ್ತರ ದಿಕ್ಕಿನಲ್ಲಿ ಹೆದ್ದಾರಿ ಡಿವೈಡರ್ ಅಳವಡಿಸಬೇಕೆಂದು ಸಾರ್ವಜನಿಕರು ಆಗ್ರಹವಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago