Featured

ಉಚ್ಚಿಲ : ಪಣಿಯೂರು-ಹೆದ್ದಾರಿ 66ರ ಅಪಘಾತ ವಲಯಕ್ಕೆ ತಾರ್ಕಿಕ ಅಂತ್ಯ  – ಸಾರ್ವಜನಿಕರು ನಿಟ್ಟಿಸಿರು – Vishwanews24

ಉಚ್ಚಿಲ : ಪಣಿಯೂರು-ಹೆದ್ದಾರಿ 66ರ ಅಪಘಾತ ವಲಯಕ್ಕೆ ತಾರ್ಕಿಕ ಅಂತ್ಯ – ಸಾರ್ವಜನಿಕರು ನಿಟ್ಟಿಸಿರು

ಕಾಪು: ಉಚ್ಚಿಲದ ಅಪಘಾತ ವಲಯ ಎಂದೇ ಕುಖ್ಯಾತಿ ಪಡೆದಿದ್ದ ಪಣಿಯೂರು- ಹೆದ್ದಾರಿ 66ರ ತಿರುವಿಗೆ ರವಿವಾರ ಸಂಜೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಸಾರ್ವಜನಿಕರು ನಿಟ್ಟಿಸಿರು ಬಿಡುವಂತಾಗಿದೆ.

ಇಲ್ಲಿಯ ಅವೈಜ್ಞಾನಿಕ ತಿರುವಿನಲ್ಲಿ ಮೂರು ವರ್ಷದ ಅವಧಿಯಲ್ಲಿ ಸರಿಸುಮಾರು 300ಕ್ಕೂ ಹೆಚ್ಚುಅಪಘಾತಗಳು ಸಂಭವಿಸಿದೆ. ಇಲ್ಲಿ ಹಲವಾರು ಪ್ರಾಣತೆತ್ತಿದ್ದು, ಹೆಚ್ಚಿನವರು ಕೈ ಕಾಲು ಮುರಿತಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಹೆದ್ದಾರಿ ಇಲಾಖೆಗೆ ಮಾಹಿತಿ ನೀಡಿ, ಈ ಅವಜ್ಞಾನಿಕ ತಿರುವನ್ನು ಬಂದ್ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು.

ಹೆದ್ದಾರಿ ಇಲಾಖೆ ಕಿವಿ ಕೇಳದಂತಾಗಿತ್ತು. ಅಂತೂ ಭಾನುವಾರ ಸಂಜೆ ಹೆದ್ದಾರಿ ಇಲಾಖಾ ಗುತ್ತಿಗೆದಾರ ನವಯುಗ ಕಂಪನಿಯವರು ಉಚ್ಚಿಲದ ಅವೈಜ್ಞಾನಿಕ ತಿರುವನ್ನು ಕಾಂಕ್ರೀಟ್ ಸ್ಲಾಬ್ ಅಳವಡಿಸುವ ಮೂಲಕ ತಾರ್ಕಿಕ ಅಂತ್ಯ ಹಾಡಿದ್ದಾರೆ. ಉಚ್ಚಿಲದಲ್ಲಿ ಸರ್ವಿಸ್ ರಸ್ತೆ ಸಂಪೂರ್ಣಗೊಂಡಿದ್ದರೂ, ಸರ್ವೀಸ್‌ ರಸ್ತೆಯಲ್ಲಿ ಹೆದ್ದಾರಿಯ ಪೂರ್ವ ಅಥವಾ ಪಶ್ಚಿ ಭಾಗಕ್ಕೆ ಸಾಗಲು ಉತ್ತರದಲ್ಲಿ ಕೊಪ್ಪಲಂಗಡಿ ಮತ್ತು ದಕ್ಷಿಣದಲ್ಲಿ ಎರ್ಮಾಳಿಗೆ ಸಾಗುವ ಪರಿಸ್ಥಿತಿ ಇದೆ. ಇದರಿಂದಾಗಿ ವಾಹನ ಸವಾರರು ವಿರುದ್ಧ ದಿಕ್ಕಿನಿಂದ ಸಾಗುವುದರಿಂದ ಮತ್ತೊಂದು ಅಪಘಾತ ವಲಯವಾಗಿ ಮಾರ್ಪಟ್ಟಿದೆ.

ಆದಷ್ಟು ಶೀಘ್ರವಾಗಿ ಉತ್ತರ ದಿಕ್ಕಿನಲ್ಲಿ ಹೆದ್ದಾರಿ ಡಿವೈಡರ್ ಅಳವಡಿಸಬೇಕೆಂದು ಸಾರ್ವಜನಿಕರು ಆಗ್ರಹವಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago