Featured

ಉಚ್ಚಿಲ-ಪಣಿಯೂರು : 7 ಕೋಟಿ ರೂ. ಅನುದಾನದ ದ್ವಿಪಥ ರಸ್ತೆ ಕಾಮಗಾರಿಯ ಅವ್ಯವಸ್ಥೆ; ವ್ಯಾಪಾರಸ್ಥರು, ನಿವಾಸಿಗಳಿಗೆ ಧೂಳು ತಿನ್ನುವ ಸಂಕಟ, ವಾಹನ ಸವಾರರಿಗೆ ಸಂಚಾರದ ಸಂಕಟ -Vishwanews24

ಉಚ್ಚಿಲ-ಪಣಿಯೂರು : 7 ಕೋಟಿ ರೂ. ಅನುದಾನದ ದ್ವಿಪಥ ರಸ್ತೆ ಕಾಮಗಾರಿಯ ಅವ್ಯವಸ್ಥೆ; ವ್ಯಾಪಾರಸ್ಥರು, ನಿವಾಸಿಗಳಿಗೆ ಧೂಳು ತಿನ್ನುವ ಸಂಕಟ, ವಾಹನ ಸವಾರರಿಗೆ ಸಂಚಾರದ ಸಂಕಟ -Vishwanews24

ಕಾಪು : ರೂಪಾಯಿ 7 ಕೋಟಿ ಅನುದಾನದ ಉಚ್ಚಿಲ ರಾ.ಹೆ. ೬೬ರಿಂದ ಪಣಿಯೂರು – ಮುದರಂಗಡಿ ಸಂಪರ್ಕದ ಲೋಕೋಪಯೋಗಿ ರಸ್ತೆಯ ಪಣಿಯೂರು ಜಂಕ್ಷನ್‌ವರೆಗಿನ ೨.೬೦ ಕಿ.ಮೀ ದ್ವಿಪಥ ರಸ್ತೆಯ ಅಭಿವೃದ್ಧಿ ಕಾಮಗಾರಿಯು ಆಮೆಗತಿಯಿಂದ ಸಾಗುತ್ತಿದ್ದು, ಈ ಭಾಗದ ನಿವಾಸಿಗಳು, ವ್ಯಾಪಾರಸ್ಥರು ನಿತ್ಯ ಧೂಳಿನ ಕಾಟ ಅನುಭವಿಸುವಂತಾಗಿದ್ದು, ವಾಹನ ಸವಾರರು ಸಂಚಾರಕ್ಕೆ ಸಂಕಟ ಅನುಭವಿಸುವಂತಾಗಿದೆ

ನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುವ ವಾಹನ ನಿಬಿಡ ಮತ್ತು ಜನಸಂಚಾರ ನಿಬಿಡವಾದ ಪ್ರಮುಖ ರಸ್ತೆಯು ಇದಾಗಿದೆ. ಆದರೆ ಅಭಿವೃದ್ಧಿ ಕಾಮಗಾರಿಯು ಆರಂಭ ಶೂರನಂತೆ ೫ ಕಡೆಗಳಲ್ಲಿ ಮೋರಿ ನಿರ್ಮಾಣ ಕಾಮಗಾರಿಗೆ ಮಾತ್ರ ಸೀಮಿತಗೊಂಡಿದ್ದು, ಮತ್ತೆ ಅಭಿವೃದ್ಧಿ ಕಾಮಗಾರಿ ಮುಂದುವರೆಯುವುದು ಕಂಡು ಬರುತ್ತಿಲ್ಲ. ಮೋರಿ ನಿರ್ಮಾಣಗೊಂಡ ಬಳಿಕ ತೆರವುಗೊಳಿಸದ ಮಣ್ಣು ರಸ್ತೆಯಲ್ಲಿಯೇ ಉಳಿದಿದ್ದು, ವಾಹನ ಸಂಚಾರದ ಸಂದರ್ಭ ಸ್ಥಳೀಯರು ಧೂಳಿನ ಅಭಿಷೇಕವನ್ನು ಅನುಭವಿಸುವಂತಾಗಿದೆ. ಅದರೊಂದಿಗೆ ನಡೆದ ಕಾಮಗಾರಿಯ ಪ್ರದೇಶದಲ್ಲಿ ವಾಹನಗಳು ದೊಡ್ಡ ಶಬ್ದ ಮಾಡುತ್ತಾ ಹೊಂಡ ದಿಣ್ಣೆಗಳನ್ನು ಏರಿ ಸಾಗುವ ದುಸ್ಥಿತಿ ಅನುಭವಿಸುವಂತಾಗಿದೆ ಎಂದು ವಾಹನ ಚಾಲಕರು ತಮ್ಮ ಅಸಹನೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.

ನಗರ, ಪಟ್ಟಣಗಳನ್ನು ಸಂಪರ್ಕಿಸುವ ಸಂಪರ್ಕ ರಸ್ತೆಗಳು ಸುಸಜ್ಜಿತಗೊಂಡಲ್ಲಿ ಗ್ರಾಮದ ಜೊತೆಗೆ ಗ್ರಾಮೀಣ ಭಾಗದ ಜನರ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ಎಂಬ ನಿಟ್ಟಿನಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ೨೦೨೦ರ ಅಕ್ಟೋಬರ್ ೧೮ರಂದು ದ್ವಿಪಥ ರಸ್ತೆ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದು, ರಸ್ತೆಯ ಇಕ್ಕೆಲಗಳಲ್ಲಿ ೫೦ ಮೀ. ವ್ಯಾಪ್ತಿಯಲ್ಲಿ ಚರಂಡಿ ಹಾಗೂ ರಸ್ತೆಯ ನಡುವೆ ವಿಭಾಜಕವನ್ನು ನಿರ್ಮಿಸಿ ಸುರಕ್ಷಿತ ಸಂಚಾರ ಮತ್ತು ಸುಂದರ ರಸ್ತೆಯ ನಿರ್ಮಾಣ ಕಾರ್ಯ ನಡೆಯಲಿದ್ದು ರಾಷ್ಟಿçÃಯ ಹೆದ್ದಾರಿ ಸಂಪರ್ಕದ ಈ ಪ್ರದೇಶವು ಸುಸಜ್ಜಿತಗೊಳ್ಳಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದರು.

ಆದರೆ ಇದೀಗ ರಸ್ತೆಯ ನಡುವೆಯೇ ಚರಂಡಿ ನಿರ್ಮಿಸಿದಂತಾಗಿದ್ದು, ಕಾಮಗಾರಿಯೂ ಮಂದಗತಿಯಿ0ದ ಸಾಗುತ್ತಿದ್ದು ಈ ಭಾಗದಲ್ಲಿ ಸಾರ್ವಜನಿಕರು, ಸ್ಥಳೀಯ ನಿವಾಸಿಗಳು, ವಾಹನ ಸವಾರರು, ವ್ಯಾಪಾರಸ್ಥರು ಅನುಭವಿಸುವ ಸಂಕಷ್ಟಕ್ಕೆ ಸಂಬ0ಧ ಪಟ್ಟ ಇಲಾಖಾಧಿಕಾರಿಗಳು ಎಚ್ಚೆತ್ತು ಕಾಮಗಾರಿಯು ವೇಗವನ್ನು ಪಡೆದು ಸುರಕ್ಷಿತ ಸಂಚಾರ ಸಾಧ್ಯಕ್ಕೆ ಜನತೆ ಆಗ್ರಹಿಸುತ್ತಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

6 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

7 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

7 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

7 hours ago