ಕಾಪು : ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂಪಾಯಿ ನಗದು ಹಾಗೂ 500 ರೂಪಾಯಿ ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಲಾದ ಘಟನೆ ಉಡುಪಿಯ ಕಾಪುವಿನ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ.
ಕಿಡಿಗೇಡಿಗಳು ಗುಡಿಯ ಒಳಗೆ ಪ್ರವೇಶಿಸಿ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ.
ಬಳಿಕ ದ್ವಾರದಲ್ಲಿದ್ದ ಎರಡು ಲಾಕರ್ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕೂಡಾ ಕಂಡುಬಂದಿದೆ. ದೇಗುಲದ ಕಚೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ.
ಅಲ್ಲಿಂದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳವು ಮಾಡಿದ್ದಾರೆ. ಕಳ್ಳರು ಧ್ವಜಸ್ತಂಭದ ಮೇಲೇರಿ ದೇಗುಲದ ಒಳಗೆ ಪ್ರವೇಶಿಸಿದ್ದು, ಹೊರ ಹೋಗುವಾಗ ಪಶ್ಚಿಮದ ಮುಖ್ಯದ್ವಾರ ತೆರೆದುಕೊಂಡು ಹೋಗಿದ್ದಾರೆ.ದೇಗುಲದ ಸಹ ಅರ್ಚಕ ರಾಜಾರಾಮ್ ಭಟ್ ಅವರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣ ಆಡಳಿತ ಮಂಡಳಿಯವರಿಗೆ ಮಾಹಿತಿ ನೀಡಿದ್ದಾರೆ.
ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಪಡುಬಿದ್ರಿಯವರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಳ್ಳನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ…
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ…
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ…
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…