Featured

ಉಚ್ಚಿಲ : ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದರೋಡೆ : ನಗದು ಸಹಿತ 2 ಬೆಳ್ಳಿ ತಟ್ಟೆ ಕಳವು – Vishwanews24

ಉಚ್ಚಿಲ : ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದರೋಡೆ : ನಗದು ಸಹಿತ 2 ಬೆಳ್ಳಿ ತಟ್ಟೆ ಕಳವು

ಕಾಪು : ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂಪಾಯಿ ನಗದು ಹಾಗೂ 500 ರೂಪಾಯಿ ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಲಾದ ಘಟನೆ ಉಡುಪಿಯ ಕಾಪುವಿನ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ.

ಕಿಡಿಗೇಡಿಗಳು ಗುಡಿಯ ಒಳಗೆ ಪ್ರವೇಶಿಸಿ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ.

ಬಳಿಕ ದ್ವಾರದಲ್ಲಿದ್ದ ಎರಡು ಲಾಕರ್‌ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕೂಡಾ ಕಂಡುಬಂದಿದೆ. ದೇಗುಲದ‌ ಕಚೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ.

ಅಲ್ಲಿಂದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳವು ಮಾಡಿದ್ದಾರೆ. ಕಳ್ಳರು ಧ್ವಜಸ್ತಂಭದ ಮೇಲೇರಿ ದೇಗುಲದ ಒಳಗೆ ಪ್ರವೇಶಿಸಿದ್ದು, ಹೊರ ಹೋಗುವಾಗ ಪಶ್ಚಿಮದ ಮುಖ್ಯದ್ವಾರ ತೆರೆದುಕೊಂಡು ಹೋಗಿದ್ದಾರೆ.ದೇಗುಲದ ಸಹ ಅರ್ಚಕ ರಾಜಾರಾಮ್‌ ಭಟ್‌ ಅವರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣ ಆಡಳಿತ ಮಂಡಳಿಯವರಿಗೆ ಮಾಹಿತಿ ನೀಡಿದ್ದಾರೆ.

ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್‌ ಶೆಟ್ಟಿ ಪಡುಬಿದ್ರಿಯವರು ಪಡುಬಿದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಕಳ್ಳನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

19 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

20 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

20 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago