ಉಚ್ಚಿಲ : ಪಾದಚಾರಿಯೊರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ನಿಟ್ಟೆ ನಿವಾಸಿ ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ನರ್ಸರಿಯಲ್ಲಿ ಸಸಿ ಖರೀದಿಸಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದು,ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಯುವಕರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿದ್ದು,ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಉಚ್ಚಿಲ ಪೊಲ್ಯ ಕ್ರಾಸ್ ಬಳಿಯ ಮಹಾಲಿಂಗೇಶ್ವರ ದೇವಸ್ಥಾನದ ವಿರುದ್ಧ ದಿಕ್ಕಿನಲ್ಲಿ ದೇವರಿಗೆ ಕೈ ಮುಗಿಯುತ್ತಿದ್ದ ವೇಳೆ ಅಪಘಾತ ನಡೆದಿರಬಹುದೆಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ಪಕ್ಕದ ಪೊಲ್ಯ ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಅಳವಡಿಸಲಾದ ಬ್ಯಾನರ್ ರಸ್ತೆಗೆ ಅಡ್ಡಲಾಗಿದ್ದು,ಇದರಿಂದಾಗಿ ರಸ್ತೆ ದಾಟುವವರಿಗೆ ಹೆದ್ದಾರಿಯಲ್ಲಿ ಚಲಿಸುವ ವಾಹನಗಳು ಗೋಚರಿಸದೆ ಅಪಘಾತಗಳು ನಡೆಯುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…