ಪಡುಬಿದ್ರಿ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಲಾರಿಯೊಂದು ಢಿಕ್ಕಿಯಾಗಿ ತಂದೆ- ಮಗ ಮೃತಪಟ್ಟಿದ್ದು, ಈ ಗೂಡ್ಸ್ ಲಾರಿಯನ್ನು 16 ವರ್ಷದ ಬಾಲಕ ಚಲಾಯಿಸುತ್ತಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
ಅಪಘಾತಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ಜಿಲ್ಲೆ ಹುಕ್ಕೇರಿ ಮೂಲದ ಬಾಲಕ ಸಮರ್ಥ್ ಪೋದ್ದಾರ್ (13) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದೇ ಘಟನೆಯಲ್ಲಿ ಲಾರಿಯ ಚಕ್ರ ಮೈಮೇಲೆ ಹರಿದು ಹೋಗಿದ್ದರಿಂದ ಸ್ಥಳದಲ್ಲೇ ಸಮರ್ಥ್ ತಂದೆ ಪ್ರಭಾಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಇನ್ನು ಸೂರ್ಯ ಚೈತನ್ಯ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಸಮರ್ಥ, ರಜೆಯಲ್ಲಿ ಗಣೇಶ ಚೌತಿ ಹಬ್ಬಕ್ಕೆ ಊರಿಗೆ ತೆರಳಿದ್ದು, ತಂದೆಯೊಂದಿಗೆ ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಉಚ್ಚಿಲದಲ್ಲಿ ಇಳಿದಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿಯಾಗಿ ಪರಾರಿಯಾಗಿತ್ತು.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಪರಾರಿಯಾಗಿದ್ದ ಗೂಡ್ಸ್ ಲಾರಿಯನ್ನು ಪೊಲೀಸರು ಸಿಸಿ ಟಿವಿ ಫೂಟೇಜ್ಗಳನ್ನು ಆಧರಿಸಿ ಬೆಂಬತ್ತಿ ಹೋಗಿ ಲಾರಿಯ ಚಾಲಕ, ಆರೋಪಿ ಶೇಖರ್ನನ್ನು ವಶಕ್ಕೆ ಪಡೆದಿದ್ದು, ಆತನನ್ನು ವಿಚಾರಣೆ ನಡೆಸಿದಾಗ ಲಾರಿಯನ್ನು 16 ವರ್ಷದ ಬಾಲಕ ರಾತ್ರಿಯಿಡೀ ಚಲಾಯಿಸಿಕೊಂಡು ಬಂದಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
ಇನ್ನು ಆ ಬಾಲಕ ಲಾರಿಯ ಕ್ಲೀನರ್ ಬಾಯ್ ಆಗಿದ್ದು, ಬಾಲಕನು ಯಾವುದೇ ಲಾರಿಯಾದರೂ ರಾತ್ರಿ ವೇಳೆ ಮುಂಬಯಿ ಎಕ್ಸ್ಪ್ರಸ್ ವೇನಂತಹ ಹೆದ್ದಾರಿಯಲ್ಲೂ ಸಹಿತ ಚಲಾಯಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ.
ಪ್ಲಾಸ್ಟಿಕ್ ಉತ್ಪಾದನೆಯ ಕಚ್ಚಾ ವಸ್ತುವನ್ನು ಗುಜರಾತ್ನಿಂದ ಹೊತ್ತು ಬರುತ್ತಿದ್ದ ಈ ಲಾರಿಯನ್ನು ಪೊಲೀಸರು ಗಂಜಿಮಠ ಪರಿಸರದಿಂದ ವಶಕ್ಕೆ ಪಡೆದುಕೊಂಡಿದ್ದು, ಚಾಲಕ ಶೇಖರ್ನನ್ನು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕನನ್ನು ಖಾಸಗಿ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…