ಪಡುಬಿದ್ರಿ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಲಾರಿಯೊಂದು ಢಿಕ್ಕಿಯಾಗಿ ತಂದೆ- ಮಗ ಮೃತಪಟ್ಟಿದ್ದು, ಈ ಗೂಡ್ಸ್ ಲಾರಿಯನ್ನು 16 ವರ್ಷದ ಬಾಲಕ ಚಲಾಯಿಸುತ್ತಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
ಅಪಘಾತಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ಜಿಲ್ಲೆ ಹುಕ್ಕೇರಿ ಮೂಲದ ಬಾಲಕ ಸಮರ್ಥ್ ಪೋದ್ದಾರ್ (13) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದೇ ಘಟನೆಯಲ್ಲಿ ಲಾರಿಯ ಚಕ್ರ ಮೈಮೇಲೆ ಹರಿದು ಹೋಗಿದ್ದರಿಂದ ಸ್ಥಳದಲ್ಲೇ ಸಮರ್ಥ್ ತಂದೆ ಪ್ರಭಾಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಇನ್ನು ಸೂರ್ಯ ಚೈತನ್ಯ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಸಮರ್ಥ, ರಜೆಯಲ್ಲಿ ಗಣೇಶ ಚೌತಿ ಹಬ್ಬಕ್ಕೆ ಊರಿಗೆ ತೆರಳಿದ್ದು, ತಂದೆಯೊಂದಿಗೆ ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಉಚ್ಚಿಲದಲ್ಲಿ ಇಳಿದಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿಯಾಗಿ ಪರಾರಿಯಾಗಿತ್ತು.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಪರಾರಿಯಾಗಿದ್ದ ಗೂಡ್ಸ್ ಲಾರಿಯನ್ನು ಪೊಲೀಸರು ಸಿಸಿ ಟಿವಿ ಫೂಟೇಜ್ಗಳನ್ನು ಆಧರಿಸಿ ಬೆಂಬತ್ತಿ ಹೋಗಿ ಲಾರಿಯ ಚಾಲಕ, ಆರೋಪಿ ಶೇಖರ್ನನ್ನು ವಶಕ್ಕೆ ಪಡೆದಿದ್ದು, ಆತನನ್ನು ವಿಚಾರಣೆ ನಡೆಸಿದಾಗ ಲಾರಿಯನ್ನು 16 ವರ್ಷದ ಬಾಲಕ ರಾತ್ರಿಯಿಡೀ ಚಲಾಯಿಸಿಕೊಂಡು ಬಂದಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
ಇನ್ನು ಆ ಬಾಲಕ ಲಾರಿಯ ಕ್ಲೀನರ್ ಬಾಯ್ ಆಗಿದ್ದು, ಬಾಲಕನು ಯಾವುದೇ ಲಾರಿಯಾದರೂ ರಾತ್ರಿ ವೇಳೆ ಮುಂಬಯಿ ಎಕ್ಸ್ಪ್ರಸ್ ವೇನಂತಹ ಹೆದ್ದಾರಿಯಲ್ಲೂ ಸಹಿತ ಚಲಾಯಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ.
ಪ್ಲಾಸ್ಟಿಕ್ ಉತ್ಪಾದನೆಯ ಕಚ್ಚಾ ವಸ್ತುವನ್ನು ಗುಜರಾತ್ನಿಂದ ಹೊತ್ತು ಬರುತ್ತಿದ್ದ ಈ ಲಾರಿಯನ್ನು ಪೊಲೀಸರು ಗಂಜಿಮಠ ಪರಿಸರದಿಂದ ವಶಕ್ಕೆ ಪಡೆದುಕೊಂಡಿದ್ದು, ಚಾಲಕ ಶೇಖರ್ನನ್ನು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕನನ್ನು ಖಾಸಗಿ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…