ಉಚ್ಚಿಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಘಟನೆ ನಡೆದಿದೆ.
ಮೃತ ದುರ್ದೈವಿ ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು,ಗಾಯಗೊಂಡ ಬಾಲಕ ಸಮರ್ಥ್ (14) ಎಂದು ತಿಳಿದುಬಂದಿದೆ.
ಮೃತ ಪ್ರಭಾಕರ್ ಹಾಗು ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲು ಆಗಮಿಸಿದ್ದರು.
ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು, ಸಮರ್ಥ್ ಗಂಭೀರ ಗಾಯಗೊಂಡಿದ್ದಾರೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…