ಉಚ್ಚಿಲ: ಶವ ಸಂಸ್ಕಾರ ಮಾಡಲು ಸರಿಯಾದ ಭೂಮಿ ಇಲ್ಲದ ಹಿನ್ನಲೆ : ಗ್ರಾಂ.ಪಂ.ಎದುರು ಅಂತಿಮ ಕ್ರಿಯೆಗೆ ಪ್ರಯತ್ನ -Vishwanews24

ಉಚ್ಚಿಲ : ದಲಿತ ಸಮುದಾಯಕ್ಕೆ ಮೃತ ದೇಹದ ಅಂತಿಮ ಸಂಸ್ಕಾರ ಮಾಡಲು ಸರಿಯಾದ ಭೂಮಿಯ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ದಲಿತ ನಾಯಕನ ಶವದ ಸಂಸ್ಕಾರವನ್ನು ಗ್ರಾಮ ಪಂಚಾಯತ್‌ ಮುಂದೆ ಮಾಡಲು ಪ್ರಯತ್ನಿಸಿದ ಘಟನೆ ಪಡುಬಿದ್ರೆಯೆ ಉಚ್ಚಿಲ ಬಡ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿ ಶಂಕರ್‌ ಎಂಬವರು ಮುಲ್ಲಗುಡ್ಡೆ ನಿವಾಸಿ ಮಂಗಳವಾರ ನಿಧನವಾಗಿದ್ದಾರೆ. ಆದರೆ ಅವರ ಮೃತ ದೇಹದ ಅಂತ್ಯಕ್ರಿಯೆ ಮಾಡಲು ಸ್ಥಳವಿಲ್ಲದ ಹಿನ್ನಲೆಯಲ್ಲಿ ಶವವನ್ನು ಉಚ್ಚಿಲ ಪಂಚಾಯತ್‌ ಕಚೇರಿಯ ಮುಂದೆ ಇಟ್ಟುಕೊಂಡು ಅಲ್ಲೇ ಅವರ ದೇಹದ ಅಂತ್ಯಕ್ರಿಯೆ ಮಾಡಲು ಮಂದಾಗುವ ಮೂಲಕ ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ಇದೆ.

ಈ ಪ್ರದೇಶದಲ್ಲಿ ಸಾರ್ವಜನಿಕ ಹಿಂದೂ ಸ್ಮಶಾನವಿದೆ. ಆದರೆ ದಲಿತ ಸಮುದಾಯಕ್ಕೆ ಸೇರಿದ ಜನರ ಮೃತ ದೇಹಗಳ ಅಂತ್ಯ ಸಂಸ್ಕಾರ ಮಾಡಲು ಅಲ್ಲಿ ನಿಬಂಧ ಹೇರಲಾಗಿದೆ. ಆ ಸ್ಮಶಾನದಲ್ಲಿ ಮೇಲ್ಜಾತಿಯವರಾದ ಮೊಗವೀರ ಸಮಾಜದವರಿಗೆ ಮಾತ್ರ ಅಂತ್ಯಕ್ರಿಯೆ ಮಾಡಲು ಅವಕಾಶವಿದೆ.

ಈ ಸಾರ್ವಜನಿಕ ಹಿಂದೂ ಸ್ಮಶಾನವು ಸರ್ಕಾರಕ್ಕೆ ಸೇರಿದ್ದರೂ ದಲಿತರಿಗೆ ಆ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶವಿಲ್ಲ. ಈ ವಿಷಯದಲ್ಲಿ ದಲಿತ ಸಂಘರ್ಷ ಸಮಿತಿ ತೀವ್ರ ಹೋರಾಟ ನಡೆಸಿದೆ. ಪಂಚಾಯತ್‌ ಆಡಳಿತ ಜಿಲ್ಲಾಡಳಿತದಿಂದ ಲಕ್ಷ ರೂಪಾಯಿಗಳ ಅನುದಾನವನ್ನು ಪಡೆದಿದ್ದರೂ ದಲಿತರಿಗೆ ಶವ ಸಂಸ್ಕಾರ ಮಾಡಲು ಸ್ಮಶಾನ ನಿರ್ಮಿಸುತ್ತಿಲ್ಲ.

ಸ್ಥಳಕ್ಕೆ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಪೊಲೀಸರು ಧಾವಿಸಿದ್ದಾರೆ.

 

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

54 seconds ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

31 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

44 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 hour ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 hour ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

2 hours ago