ಉಚ್ಚಿಲ : ದಲಿತ ಸಮುದಾಯಕ್ಕೆ ಮೃತ ದೇಹದ ಅಂತಿಮ ಸಂಸ್ಕಾರ ಮಾಡಲು ಸರಿಯಾದ ಭೂಮಿಯ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ದಲಿತ ನಾಯಕನ ಶವದ ಸಂಸ್ಕಾರವನ್ನು ಗ್ರಾಮ ಪಂಚಾಯತ್ ಮುಂದೆ ಮಾಡಲು ಪ್ರಯತ್ನಿಸಿದ ಘಟನೆ ಪಡುಬಿದ್ರೆಯೆ ಉಚ್ಚಿಲ ಬಡ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಶಂಕರ್ ಎಂಬವರು ಮುಲ್ಲಗುಡ್ಡೆ ನಿವಾಸಿ ಮಂಗಳವಾರ ನಿಧನವಾಗಿದ್ದಾರೆ. ಆದರೆ ಅವರ ಮೃತ ದೇಹದ ಅಂತ್ಯಕ್ರಿಯೆ ಮಾಡಲು ಸ್ಥಳವಿಲ್ಲದ ಹಿನ್ನಲೆಯಲ್ಲಿ ಶವವನ್ನು ಉಚ್ಚಿಲ ಪಂಚಾಯತ್ ಕಚೇರಿಯ ಮುಂದೆ ಇಟ್ಟುಕೊಂಡು ಅಲ್ಲೇ ಅವರ ದೇಹದ ಅಂತ್ಯಕ್ರಿಯೆ ಮಾಡಲು ಮಂದಾಗುವ ಮೂಲಕ ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ಇದೆ.
ಈ ಪ್ರದೇಶದಲ್ಲಿ ಸಾರ್ವಜನಿಕ ಹಿಂದೂ ಸ್ಮಶಾನವಿದೆ. ಆದರೆ ದಲಿತ ಸಮುದಾಯಕ್ಕೆ ಸೇರಿದ ಜನರ ಮೃತ ದೇಹಗಳ ಅಂತ್ಯ ಸಂಸ್ಕಾರ ಮಾಡಲು ಅಲ್ಲಿ ನಿಬಂಧ ಹೇರಲಾಗಿದೆ. ಆ ಸ್ಮಶಾನದಲ್ಲಿ ಮೇಲ್ಜಾತಿಯವರಾದ ಮೊಗವೀರ ಸಮಾಜದವರಿಗೆ ಮಾತ್ರ ಅಂತ್ಯಕ್ರಿಯೆ ಮಾಡಲು ಅವಕಾಶವಿದೆ.
ಈ ಸಾರ್ವಜನಿಕ ಹಿಂದೂ ಸ್ಮಶಾನವು ಸರ್ಕಾರಕ್ಕೆ ಸೇರಿದ್ದರೂ ದಲಿತರಿಗೆ ಆ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶವಿಲ್ಲ. ಈ ವಿಷಯದಲ್ಲಿ ದಲಿತ ಸಂಘರ್ಷ ಸಮಿತಿ ತೀವ್ರ ಹೋರಾಟ ನಡೆಸಿದೆ. ಪಂಚಾಯತ್ ಆಡಳಿತ ಜಿಲ್ಲಾಡಳಿತದಿಂದ ಲಕ್ಷ ರೂಪಾಯಿಗಳ ಅನುದಾನವನ್ನು ಪಡೆದಿದ್ದರೂ ದಲಿತರಿಗೆ ಶವ ಸಂಸ್ಕಾರ ಮಾಡಲು ಸ್ಮಶಾನ ನಿರ್ಮಿಸುತ್ತಿಲ್ಲ.
ಸ್ಥಳಕ್ಕೆ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಪೊಲೀಸರು ಧಾವಿಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…